ದೇಶ- ವಿದೇಶ

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ.

ಬೆಂಗಳೂರಿನಲ್ಲಿ ಇಂದು 127 ಸೇರಿದಂತೆ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ.

ಭಾರತ ಹಿಂದೆಂದೂ ಕಂಡು ಕೇಳರಿಯದ ಪ್ರಮಾಣದಲ್ಲಿ ವಿಮಾನಗಳ ಹಾರಾಟದ ಬಿಕ್ಕಟ್ಟು ಸತತ ಏಳನೇ ದಿನಕ್ಕೆ ಕಾಲಿಟ್ಟಿದೆ.

ಇದನ್ನು ಓದಿ: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ದೆಹಲಿ ವಿಮಾನ ನಿಲ್ದಾಣದಲ್ಲಿ ನಿರ್ಗಮನ ಹಾಗೂ ಆಗಮನ ಸೇರಿ ಒಟ್ಟು 134 ವಿಮಾನಗಳು, ಬೆಂಗಳೂರಿನಲ್ಲಿ 127, ಚೆನ್ನೈನಲ್ಲಿ 71, ಹೈದರಾಬಾದ್‌ನಲ್ಲಿ 77, ಜಮ್ಮುವಿನಲ್ಲಿ 20, ಅಹಮದಾಬಾದ್‌ನಲ್ಲಿ 20 ಹಾಗೂ ವೈಜಾಗ್‌ನಲ್ಲಿ 7, ಮುಂಬೈ, ಕೋಲ್ಕತ್ತಾ ಸೇರಿದಂತೆ ಇತರ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ವಿಮಾನ ಟಿಕೆಟ್‌ ದರ ಹೆಚ್ಚಾಗಿದೆ. ಹೀಗಾಗಿ ಅನಿವಾರ್ಯವಾಗಿ ಏರ್‌ ಆಂಬುಲೆನ್ಸ್‌ಗಳ ದರವೂ ಏರಿಕೆಯಾಗಿದೆ. ಇದರ ಮೂಲಕ ರೋಗಿಗಳನ್ನು ಶಿಫ್ಟ್‌ ಮಾಡಲು ಸಮಸ್ಯೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

3 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

3 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

3 hours ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

3 hours ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

3 hours ago