ದೇಶ- ವಿದೇಶ

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ.

ಬೆಂಗಳೂರಿನಲ್ಲಿ ಇಂದು 127 ಸೇರಿದಂತೆ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ.

ಭಾರತ ಹಿಂದೆಂದೂ ಕಂಡು ಕೇಳರಿಯದ ಪ್ರಮಾಣದಲ್ಲಿ ವಿಮಾನಗಳ ಹಾರಾಟದ ಬಿಕ್ಕಟ್ಟು ಸತತ ಏಳನೇ ದಿನಕ್ಕೆ ಕಾಲಿಟ್ಟಿದೆ.

ಇದನ್ನು ಓದಿ: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ದೆಹಲಿ ವಿಮಾನ ನಿಲ್ದಾಣದಲ್ಲಿ ನಿರ್ಗಮನ ಹಾಗೂ ಆಗಮನ ಸೇರಿ ಒಟ್ಟು 134 ವಿಮಾನಗಳು, ಬೆಂಗಳೂರಿನಲ್ಲಿ 127, ಚೆನ್ನೈನಲ್ಲಿ 71, ಹೈದರಾಬಾದ್‌ನಲ್ಲಿ 77, ಜಮ್ಮುವಿನಲ್ಲಿ 20, ಅಹಮದಾಬಾದ್‌ನಲ್ಲಿ 20 ಹಾಗೂ ವೈಜಾಗ್‌ನಲ್ಲಿ 7, ಮುಂಬೈ, ಕೋಲ್ಕತ್ತಾ ಸೇರಿದಂತೆ ಇತರ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ವಿಮಾನ ಟಿಕೆಟ್‌ ದರ ಹೆಚ್ಚಾಗಿದೆ. ಹೀಗಾಗಿ ಅನಿವಾರ್ಯವಾಗಿ ಏರ್‌ ಆಂಬುಲೆನ್ಸ್‌ಗಳ ದರವೂ ಏರಿಕೆಯಾಗಿದೆ. ಇದರ ಮೂಲಕ ರೋಗಿಗಳನ್ನು ಶಿಫ್ಟ್‌ ಮಾಡಲು ಸಮಸ್ಯೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

18 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

18 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

18 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

18 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

18 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

18 hours ago