ದೇಶ- ವಿದೇಶ

ಮೈಸೂರು ಸೇರಿದಂತೆ 9 ಜಿಲ್ಲೆಗೆ ಕೈಗಾರಿಕಾ ಕಾರಿಡಾರ್‌ : ಗೋಯಲ್‌ ಜೊತೆ ಎಚ್‌ಡಿಕೆ ಮಾತುಕತೆ

ಹೊಸದಿಲ್ಲಿ : ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಶ್‌ ಗೋಯಲ್‌ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು.

ದಿಲ್ಲಿಯ ಗುರುವಾರ ವಾಣಿಜ್ಯ ಸಚಿವಾಲಯದ ಕಚೇರಿಗೆ ತೆರಳಿ ಸಚಿವ ಗೋಯಲ್‌ ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು; ಈ ಯೋಜನೆ ಕುರಿತ ಮನವಿಯನ್ನು ಸಲ್ಲಿಸಿ ರಾಜ್ಯದ ಕೈಗಾರಿಕಾಭಿವೃದ್ಧಿ ಬಗ್ಗೆ ವಿವಿಧ ಆಯಾಮಗಳಲ್ಲಿ ಚರ್ಚೆ ನಡೆಸಿದರು.

ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ, ಬಹುವ್ಯಾಪ್ತಿಯುಳ್ಳ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP) ಅನುಷ್ಠಾನ ಮಾಡಬೇಕೆಂದು ಕೋರಿ ಗೋಯಲ್‌ ಅವರನ್ನು ಕೋರಲಾಯಿತು. ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಯೋಜನೆಯ ಚೌಕಟ್ಟಿನಡಿಯಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸುವ ಕುರಿತಂತೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು ಎಂದು ಸಚಿವ ಕುಮಾರಸ್ವಾಮಿ ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಯನ್ನು ಬಲಪಡಿಸಿ ಉತ್ತೇಜಿಸಲು, ಸಾಗಾಣಿಕೆಯ ಮೂಲಸೌಕರ್ಯವನ್ನು ಅಧಿಕವಾಗಿ ಅಭಿವೃದ್ಧಿಪಡಿಸಲು ಹಾಗೂ ಕರ್ನಾಟಕದ ಉದ್ದಗಲಕ್ಕೂ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಈ ಯೋಜನೆಯು ಬಹುದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತದೆ ಎಂಬ ಅಂಶವನ್ನು ಸಚಿವ ಗೋಯಲ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು. ನನ್ನ ಪ್ರಸ್ತಾವನೆಗೆ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು. ರಾಜ್ಯದ ಕೈಗಾರಿಕಾಭಿವೃದ್ಧಿಗೆ ಕೈಜೋಡಿಸುವುದಾಗಿ ಭರವಸೆ ನೀಡಿದರು ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ಇದನ್ನೂ ಓದಿ:-ಬೆಳಗಾವಿಯಲ್ಲಿ ಡಿ.8 ರಿಂದ ಚಳಿಗಾಲ ಅಧಿವೇಶನ

ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಸಾಗಾಣಿಕೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಬಂದರೆ ಇಡೀ ರಾಜ್ಯಕ್ಕೆ ಸಮಗ್ರವಾಗಿ ಅನುಕೂಲ ಆಗುತ್ತದೆ. ಮುಖ್ಯವಾಗಿ ಈ ಪ್ರದೇಶಗಳು ಸಾಮೂಹಿಕವಾಗಿ ದೊಡ್ಡ ಮಟ್ಟದಲ್ಲಿ ಕೈಗಾರಿಕಾ ಅಭಿವೃದ್ಧಿ ಕಾಣುವುದಲ್ಲದೆ, ಸಮತೋಲಿತ ಪ್ರಾದೇಶಿಕ ಬೆಳವಣಿಗೆಗೆ ಕಾಣಿಕೆ ನೀಡುತ್ತವೆ ಕುಮಾರಸ್ವಾಮಿ ಚರ್ಚೆಯ ವೇಳೆ ಒತ್ತಿ ಹೇಳಿದರು.

ಈ ಪ್ರಸ್ತಾವಿತ ಕೈಗಾರಿಕಾ ಪಾರ್ಕುಗಳನ್ನು ಸೂಕ್ತವಾದ ಕೈಗಾರಿಕಾ ಕಾರಿಡಾರ್ ಇಲ್ಲವೇ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಚೌಕಟ್ಟಿನ ಅಡಿಯಲ್ಲಿ ಪರಿಗಣಿಸಬೇಕೆಂದು ವಿನಂತಿಸಿದ ಕುಮಾರಸ್ವಾಮಿ ಅವರು; ಈ ಜಿಲ್ಲೆಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ಗಳಿಗೆ ಸಂಯೋಜಿಸುವ ಮೂಲಕ ಕರ್ನಾಟಕವು ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸಲು ಅನುಕೂಲವಾಗುತ್ತದೆ. ಅಲ್ಲದೆ, ಸಾಕಾಣಿಗೆ ಸುಲಭವಾಗಿ ಖಾಸಗಿ ಬಂಡವಾಳ ಹೂಡಿಕೆಯಲ್ಲೂ ಗಮನಾರ್ಹ ಪ್ರಗತಿ ಸಾಧಿಸಲಿದೆ ಎಂದು ಉಕ್ಕು ಸಚಿವರು ಗೋಯಲ್‌ ಅವರಿಗೆ ವಿವರಿಸಿದರು.

ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ
ಸಚಿವ ಗೋಯಲ್‌ ಅವರೊಂದಿಗೆ ಚರ್ಚೆ ಬಗ್ಗೆ ಸಂತಸ ವ್ಯಕ್ತಪಡಸಿದ ಕುಮಾರಸ್ವಾಮಿ ಅವರು; ವಾಣಿಜ್ಯ ಮತ್ತು ಕೈಗಾರಿಕೆ ಸಚಿವರು ಈ ಪ್ರಸ್ತಾವನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರಲ್ಲದೆ, ಯೋಜನೆಯ ಅನುಷ್ಠಾನದ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದರು. ಅಲ್ಲದೆ; ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಉತ್ಪಾದನೆ ಮತ್ತು ಕೈಗಾರಿಕಾ ಸ್ಪರ್ಧಾತ್ಮಕತೆಯನ್ನು ಬಲಪಡಿಸುವ ಕೇಂದ್ರ ಸರ್ಕಾರದ ವಿಶಾಲ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಯೋಜನೆಯಿಂದ ರಾಜ್ಯದ ಉತ್ತರ, ಮಧ್ಯ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಕೈಗಾರಿಕಾ ವಿಸ್ತರಣೆಗೆ ಒತ್ತು ನೀಡುವಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂಬುದಾಗಿ ಕುಮಾರಸ್ವಾಮಿ ತಿಳಿಸಿದರು.

ಸಮತೋಲಿತ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ
ಪ್ರಸ್ತಾವಿತ ಕೈಗಾರಿಕಾ ಪಾರ್ಕುಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವ, ಪ್ರಾದೇಶಿಕ ಪೂರೈಕೆ ಸರಪಳಿಯ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ಉತ್ಪಾದನೆಯಿಂದ ಮೊದಲುಗೊಂಡು ರಾಯಚೂರಿನಲ್ಲಿ ಕೃಷಿ ಸಂಸ್ಕರಣೆ, ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಉತ್ತೇಜಿಸುತ್ತವೆ ಎಂದು ಸಚಿವ ಕುಮಾರಸ್ವಾಮಿ ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

7 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

7 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

8 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

10 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

11 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

13 hours ago