ಗುವಾಹಟಿ: ಅಸ್ಸಾಂನ ನಗಾಂವ್ ಜಿಲ್ಲೆಯಲ್ಲಿ ಮಾನವ-ಆನೆಗಳ ನಡುವಿನ ಸಂಘರ್ಷ ತಡೆಗಟ್ಟಲು ಅಲ್ಲಿನ ಜನರು ʼಆನೆಗಳ ಸ್ನೇಹಿತರುʼ (ಹಾಥಿ ಬಂಧು) ಎಂಬ ಹೆಸರಿನಲ್ಲಿ ವಿನೂತನ ದಾರಿ ಕಂಡುಕೊಂಡಿರುವುದನ್ನು ʼಮನದ ಮಾತುʼ ತಿಂಗಳ ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದರು.
ವಿವಿಧ ಹುಲ್ಲನ್ನು ಬೆಳೆದು ಆನೆಗಳ ಹಾವಳಿ ತಪ್ಪಿಸುವ ಈ ವಿನೂತನ ಕಾರ್ಯದ ಆಡಿಯೊ ಕ್ಲಿಪ್ ಅನ್ನು ʼಎಕ್ಸ್ʼ ನಲ್ಲಿ ಹಂಚಿಕೊಂಡಿರುವ ಮೋದಿ ಅವರು, ನಗಾಂವ್ ಜಿಲ್ಲೆಯ ಪ್ರಯತ್ನವು ಪ್ರತಿಯೊಬ್ಬರನ್ನೂ ಪ್ರೇರೇಪಿಸುವ ಶಕ್ತಿ ಹೊಂದಿದೆ ಎಂದು ಹೇಳಿದ್ದಾರೆ.
ನಗಾಂವ್ ಜಿಲ್ಲೆಯಲ್ಲಿ ನಿರಂತರವಾಗಿ ಮಾನವ-ಆನೆ ಸಂಘರ್ಷ ನಡೆಯುತ್ತಿತ್ತು. ಇದರಿಂದ ಕಂಗಲಾಗಿದ್ದ ಗ್ರಾಮಸ್ಥರು ʼಹಾಥಿ ಬಂಧುʼ ಹೆಸರಿನಲ್ಲಿ ವಿನೂತನ ಹೆಜ್ಜೆ ಇಟ್ಟಿದ್ದಾರೆ. ಗ್ರಾಮಸ್ಥರೆಲ್ಲ ಒಗ್ಗೂಡಿ 264 ಎಕರೆ ಬರಡು ಭೂಮಿಯಲ್ಲಿ ಮೇವಿನ ಹುಲ್ಲು (ನೇಪಿಯರ್ ಹುಲ್ಲು) ಬೆಳೆಯುವ ಮೂಲಕ ಆಹಾರ ಅರಸಿ ಗ್ರಾಮಗಳಿಗೆ ಬರುತ್ತಿದ್ದ ಆನೆಗಳಿಗೆ ಕಡಿವಾಣ ಹಾಕಿದ್ದಾರೆ.
ಇದರಿಂದ ಕೃಷಿ ಭೂಮಿಗೆ ಆನೆಗಳು ಲಗ್ಗೆ ಇಡುವುದು ಕಡಿಮೆ ಆಗಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ ಎಂದು ತಿಳಿಸಿದ್ದಾರೆ.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…