ದೇಶ- ವಿದೇಶ

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್ ಭೂಯಾನ್, ಕೇಂದ್ರ ಸರ್ಕಾರದ ಸಲಹೆಯಂತೆ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರನ್ನು ಅಲಹಾಬಾದ್ ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸಿರುವ ಕ್ರಮವನ್ನು ಬಹಿರಂಗವಾಗಿ ಟೀಕಿಸಿದ್ದಾರೆ.

ಕೊಲಿಜಿಯಂ ವ್ಯವಸ್ಥೆಯ ಮೇಲೆ ಇದು ಕಾರ್ಯಾಂಗದ ಒತ್ತಡಕ್ಕೆ ಬಹಿರಂಗ ನಿದರ್ಶನವಾಗಿದ್ದು, ದುರದೃಷ್ಟಕರ ಬೆಳವಣಿಗೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿ ಶ್ರೀಧರನ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದೆ, ಸರ್ಕಾರಕ್ಕೆ ಅನನುಕೂಲವೆನಿಸುವ ಆದೇಶ ನೀಡಿದ ಕಾರಣಕ್ಕೆ ಒಬ್ಬ ನ್ಯಾಯಮೂರ್ತಿಯನ್ನು ಒಂದು ಉಚ್ಚ ನ್ಯಾಯಾಲಯದಿಂದ ಮತ್ತೊಂದು ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದಾರೆ.

ನಿರ್ದಿಷ್ಟ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಮತ್ತೊಂದು ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸುವ ಸಂಬಂಧ ತಾನೇ ನೀಡಿದ್ದ ಶಿಫಾರಸನ್ನು, ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಬದಲಾಯಿಸಿರುವುದು, ಕೊಲಿಜಿಯಂ ವ್ಯವಸ್ಥೆಯ ಸಮಗ್ರತೆಯ ವಿಷಯದಲ್ಲಿ ಮಾಡಿಕೊಂಡ ರಾಜಿಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿ ಶ್ರೀಧರನ್ ಅವರನ್ನು ಮಧ್ಯಪ್ರದೇಶ ಉಚ್ಚ ನ್ಯಾಯಾಲಯದಿಂದ ಛತ್ತೀಸ್‌ಗಢ ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸಲು ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಕಳೆದ ಆಗಸ್ಟ್‌ನಲ್ಲಿ ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರದ ಮನವಿಯ ಮೇರೆಗೆ ಕೊಲಿಜಿಯಂ ತನ್ನ ನಿರ್ಧಾರವನ್ನು ಬದಲಿಸಿ, ಅವರನ್ನು ಅಕ್ಟೋಬರ್‌ನಲ್ಲಿ ವರ್ಗಾಯಿಸಿತು.

ನ್ಯಾಯಮೂರ್ತಿ ಶ್ರೀಧರನ್ ನೇತೃತ್ವದ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ಪೀಠವು ಅಲ್ಲಿನ ಸರ್ಕಾರಕ್ಕೆ ಅನನುಕೂಲವಾಗುವ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ, ದಂಡನಾತ್ಮಕ ಕ್ರಮವಾಗಿ ಅವರನ್ನು ವರ್ಗಾಯಿಸಲಾಗಿದೆ ಎಂದು ಹಲವಾರು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದರು.

ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಕೀಳುಹಾಸ್ಯದ ಭಾಷೆ ಬಳಸಿದ ಆರೋಪದ ಸಂಬಂಧ ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬಂದಿತ್ತು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

19 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

19 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

19 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

19 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

19 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago