ದೇಶ- ವಿದೇಶ

IPL-2025 ವೇಳಾಪಟ್ಟಿ ಪ್ರಕಟ: ಉದ್ಘಾಟನಾ ಪಂದ್ಯದಲ್ಲೇ ಆರ್‌ಸಿಬಿ V/S ಕೆಕೆಆರ್‌ ಮುಖಾಮುಖಿ

ಮುಂಬೈ: ಬಿಸಿಸಿಐ 2025ರ ಐಪಿಎಲ್‌ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಗೊಳಿಸಿದ್ದು, ಉದ್ಘಾಟನಾ ಪಂದ್ಯದಲ್ಲಿಯೇ ಆರ್‌ಸಿಬಿ ಮತ್ತು ಹಾಲಿ ಚಾಂಪಿಯನ್‌ ಆಗಿರುವ ಕೆಕೆಆರ್‌ ಮುಖಾಮುಖಿಯಾಗಲಿವೆ.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಇಂದು(ಫೆಬ್ರವರಿ.16) ಬಹುನಿರೀಕ್ಷಿತ ಐಪಿಎಲ್‌ನ 18ನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 20205ರ ಐಪಿಎಲ್‌ ಟೂರ್ನಿಯೂ ಮಾರ್ಚ್‌.22 ರಿಂದ ಪ್ರಾರಂಭವಾಗಲಿದ್ದು, ಮೊದಲನೇ ಪಂದ್ಯ ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಇಲ್ಲಿ ಹಾಲಿ ಚಾಂಪಿಯನ್‌ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಿಂದಲೇ ಐಪಿಎಲ್‌ ಉದ್ಘಾಟನೆಯಾಗಲಿದೆ.

ಈ ಬಾರಿಯ ಐಪಿಎಲ್‌ ಟೂರ್ನಿ ಮಾರ್ಚ್‌.22 ರಿಂದ ಮೇ.25ರವರೆಗೂ ನಡೆಯಲಿದೆ. ಒಟ್ಟು 13 ತಾಣಗಳಲ್ಲಿ 74 ಪಂದ್ಯಗಳು ನಿಗಧಿಯಾಗಿವೆ. ಅಲ್ಲದೇ 12 ಡಬಲ್ ಹೆಡರ್ (ದಿನಕ್ಕೆ 2 ಪಂದ್ಯ) ಪಂದ್ಯಗಳು ಇರಲಿದ್ದು, ಡಬಲ್‌ ಹೆಡರ್‌ ಇದ್ದಂತಹ ವೇಳೆ ಮಧ್ಯಾಹ್ನ 3.30ಕ್ಕೆ ಮೊದಲ ಪಂದ್ಯ ಮತ್ತು ರಾತ್ರಿ 7.30ಕ್ಕೆ 2ನೇ ಪಂದ್ಯ ಪ್ರಾರಂಭವಾಗಲಿದೆ.

ಇನ್ನು ಪ್ಲೇ-ಆಫ್ ಪಂದ್ಯಗಳಿಗೆ ಹೈದರಾಬಾದ್ ಮತ್ತು ಕೋಲ್ಕತ್ತಾ ತಾಣಗಳು ಆತಿಥ್ಯ ವಹಿಸಲಿವೆ. ಮೇ.20 ರಂದು ಹೈದರಾಬಾದ್‌ನಲ್ಲಿ ಮೊದಲ ಕ್ವಾಲಿಫೈಯರ್ ಹಾಗೂ ಮೇ.21ರಂದು ಎಲಿಮಿನೇಟರ್ ಪಂದ್ಯಗಳು ನಡೆಯಲಿವೆ. ಅಲ್ಲದೇ ಮೇ.23 ರಂದು ಕೋಲ್ಕತ್ತಾದ ಈಡನ್‌ ಗಾರ್ಡನ್‌ನಲ್ಲಿ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಮೇ.25 ರಂದು ಕೋಲ್ಕತ್ತಾದಲ್ಲೇ ಫೈನಲ್‌ ಪಂದ್ಯ ನಡೆಯಲಿದೆ.

ಅರ್ಚನ ಎಸ್‌ ಎಸ್

Recent Posts

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

4 mins ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

15 mins ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

20 mins ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

43 mins ago

ಮೈಸೂರು: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಮ್ 119ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ…

50 mins ago

ಬೆಂಗಳೂರಿನಲ್ಲಿಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಕದನ

ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌…

1 hour ago