ದೇಶ- ವಿದೇಶ

IPL-2025 ವೇಳಾಪಟ್ಟಿ ಪ್ರಕಟ: ಉದ್ಘಾಟನಾ ಪಂದ್ಯದಲ್ಲೇ ಆರ್‌ಸಿಬಿ V/S ಕೆಕೆಆರ್‌ ಮುಖಾಮುಖಿ

ಮುಂಬೈ: ಬಿಸಿಸಿಐ 2025ರ ಐಪಿಎಲ್‌ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಗೊಳಿಸಿದ್ದು, ಉದ್ಘಾಟನಾ ಪಂದ್ಯದಲ್ಲಿಯೇ ಆರ್‌ಸಿಬಿ ಮತ್ತು ಹಾಲಿ ಚಾಂಪಿಯನ್‌ ಆಗಿರುವ ಕೆಕೆಆರ್‌ ಮುಖಾಮುಖಿಯಾಗಲಿವೆ.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಇಂದು(ಫೆಬ್ರವರಿ.16) ಬಹುನಿರೀಕ್ಷಿತ ಐಪಿಎಲ್‌ನ 18ನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 20205ರ ಐಪಿಎಲ್‌ ಟೂರ್ನಿಯೂ ಮಾರ್ಚ್‌.22 ರಿಂದ ಪ್ರಾರಂಭವಾಗಲಿದ್ದು, ಮೊದಲನೇ ಪಂದ್ಯ ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಇಲ್ಲಿ ಹಾಲಿ ಚಾಂಪಿಯನ್‌ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಿಂದಲೇ ಐಪಿಎಲ್‌ ಉದ್ಘಾಟನೆಯಾಗಲಿದೆ.

ಈ ಬಾರಿಯ ಐಪಿಎಲ್‌ ಟೂರ್ನಿ ಮಾರ್ಚ್‌.22 ರಿಂದ ಮೇ.25ರವರೆಗೂ ನಡೆಯಲಿದೆ. ಒಟ್ಟು 13 ತಾಣಗಳಲ್ಲಿ 74 ಪಂದ್ಯಗಳು ನಿಗಧಿಯಾಗಿವೆ. ಅಲ್ಲದೇ 12 ಡಬಲ್ ಹೆಡರ್ (ದಿನಕ್ಕೆ 2 ಪಂದ್ಯ) ಪಂದ್ಯಗಳು ಇರಲಿದ್ದು, ಡಬಲ್‌ ಹೆಡರ್‌ ಇದ್ದಂತಹ ವೇಳೆ ಮಧ್ಯಾಹ್ನ 3.30ಕ್ಕೆ ಮೊದಲ ಪಂದ್ಯ ಮತ್ತು ರಾತ್ರಿ 7.30ಕ್ಕೆ 2ನೇ ಪಂದ್ಯ ಪ್ರಾರಂಭವಾಗಲಿದೆ.

ಇನ್ನು ಪ್ಲೇ-ಆಫ್ ಪಂದ್ಯಗಳಿಗೆ ಹೈದರಾಬಾದ್ ಮತ್ತು ಕೋಲ್ಕತ್ತಾ ತಾಣಗಳು ಆತಿಥ್ಯ ವಹಿಸಲಿವೆ. ಮೇ.20 ರಂದು ಹೈದರಾಬಾದ್‌ನಲ್ಲಿ ಮೊದಲ ಕ್ವಾಲಿಫೈಯರ್ ಹಾಗೂ ಮೇ.21ರಂದು ಎಲಿಮಿನೇಟರ್ ಪಂದ್ಯಗಳು ನಡೆಯಲಿವೆ. ಅಲ್ಲದೇ ಮೇ.23 ರಂದು ಕೋಲ್ಕತ್ತಾದ ಈಡನ್‌ ಗಾರ್ಡನ್‌ನಲ್ಲಿ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಮೇ.25 ರಂದು ಕೋಲ್ಕತ್ತಾದಲ್ಲೇ ಫೈನಲ್‌ ಪಂದ್ಯ ನಡೆಯಲಿದೆ.

ಅರ್ಚನ ಎಸ್‌ ಎಸ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago