ದೇಶ- ವಿದೇಶ

IPL-2025 ವೇಳಾಪಟ್ಟಿ ಪ್ರಕಟ: ಉದ್ಘಾಟನಾ ಪಂದ್ಯದಲ್ಲೇ ಆರ್‌ಸಿಬಿ V/S ಕೆಕೆಆರ್‌ ಮುಖಾಮುಖಿ

ಮುಂಬೈ: ಬಿಸಿಸಿಐ 2025ರ ಐಪಿಎಲ್‌ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಗೊಳಿಸಿದ್ದು, ಉದ್ಘಾಟನಾ ಪಂದ್ಯದಲ್ಲಿಯೇ ಆರ್‌ಸಿಬಿ ಮತ್ತು ಹಾಲಿ ಚಾಂಪಿಯನ್‌ ಆಗಿರುವ ಕೆಕೆಆರ್‌ ಮುಖಾಮುಖಿಯಾಗಲಿವೆ.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಇಂದು(ಫೆಬ್ರವರಿ.16) ಬಹುನಿರೀಕ್ಷಿತ ಐಪಿಎಲ್‌ನ 18ನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 20205ರ ಐಪಿಎಲ್‌ ಟೂರ್ನಿಯೂ ಮಾರ್ಚ್‌.22 ರಿಂದ ಪ್ರಾರಂಭವಾಗಲಿದ್ದು, ಮೊದಲನೇ ಪಂದ್ಯ ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಇಲ್ಲಿ ಹಾಲಿ ಚಾಂಪಿಯನ್‌ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಿಂದಲೇ ಐಪಿಎಲ್‌ ಉದ್ಘಾಟನೆಯಾಗಲಿದೆ.

ಈ ಬಾರಿಯ ಐಪಿಎಲ್‌ ಟೂರ್ನಿ ಮಾರ್ಚ್‌.22 ರಿಂದ ಮೇ.25ರವರೆಗೂ ನಡೆಯಲಿದೆ. ಒಟ್ಟು 13 ತಾಣಗಳಲ್ಲಿ 74 ಪಂದ್ಯಗಳು ನಿಗಧಿಯಾಗಿವೆ. ಅಲ್ಲದೇ 12 ಡಬಲ್ ಹೆಡರ್ (ದಿನಕ್ಕೆ 2 ಪಂದ್ಯ) ಪಂದ್ಯಗಳು ಇರಲಿದ್ದು, ಡಬಲ್‌ ಹೆಡರ್‌ ಇದ್ದಂತಹ ವೇಳೆ ಮಧ್ಯಾಹ್ನ 3.30ಕ್ಕೆ ಮೊದಲ ಪಂದ್ಯ ಮತ್ತು ರಾತ್ರಿ 7.30ಕ್ಕೆ 2ನೇ ಪಂದ್ಯ ಪ್ರಾರಂಭವಾಗಲಿದೆ.

ಇನ್ನು ಪ್ಲೇ-ಆಫ್ ಪಂದ್ಯಗಳಿಗೆ ಹೈದರಾಬಾದ್ ಮತ್ತು ಕೋಲ್ಕತ್ತಾ ತಾಣಗಳು ಆತಿಥ್ಯ ವಹಿಸಲಿವೆ. ಮೇ.20 ರಂದು ಹೈದರಾಬಾದ್‌ನಲ್ಲಿ ಮೊದಲ ಕ್ವಾಲಿಫೈಯರ್ ಹಾಗೂ ಮೇ.21ರಂದು ಎಲಿಮಿನೇಟರ್ ಪಂದ್ಯಗಳು ನಡೆಯಲಿವೆ. ಅಲ್ಲದೇ ಮೇ.23 ರಂದು ಕೋಲ್ಕತ್ತಾದ ಈಡನ್‌ ಗಾರ್ಡನ್‌ನಲ್ಲಿ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಮೇ.25 ರಂದು ಕೋಲ್ಕತ್ತಾದಲ್ಲೇ ಫೈನಲ್‌ ಪಂದ್ಯ ನಡೆಯಲಿದೆ.

ಅರ್ಚನ ಎಸ್‌ ಎಸ್

Recent Posts

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

33 mins ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

51 mins ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

2 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

2 hours ago

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

3 hours ago

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

4 hours ago