ಜೆರುಸೇಲಂ: ಇರಾನ್-ಇಸ್ರೇಲ್ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಹೋರಾಟ ನಿಲ್ಲಿಸುವಂತೆ ಹಲವು ಕರೆಗಳು ಬಂದಿದ್ದರೂ, ಎರಡೂ ದೇಶಗಳು ಹಿಂದೆ ಸರಿಯದೇ ಸಂಘರ್ಷ ಮುಂದುವರಿಸಿವೆ. ಜನಸಂಖ್ಯಾ ಕೇಂದ್ರಗಳ ಮೇಲೆ ಇಸ್ರೇಲ್ ತೀವ್ರವಾದ ವೈಮಾನಿಕ ದಾಳಿ ನಡೆಸಿದೆ ಎಂದು ಇರಾನ್ ಹೇಳಿದೆ.
ಇಂದು ಬೆಳಿಗ್ಗೆ ಟೆಹರಾನ್ನ ವಿವಿಧೆಡೆಯೂ ಸ್ಫೋಟ ಸಂಭವಿಸಿದ್ದು, ಸಂಘರ್ಷದಲ್ಲಿ ದೇಶದಲ್ಲಿ 224 ಮಂದಿ ಮೃತಪಟ್ಟಿದ್ದು, 1,277ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಸ್ರೇಲ್ ವಿರುದ್ಧ ಕೆಂಡಕಾರಿರುವ ಇರಾನ್ ಹಲವು ಡ್ರೋನ್ಗಳನ್ನು ಹಾರಿಸಿದೆ. ಇರಾನ್ ಪರಮಾಣು ಯೋಜನೆಯಲ್ಲಿ ಭಾಗಿಯಾಗಿರುವ ಹಲವು ವಿಜ್ಞಾನಿಗಳು ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ಭಾರತದಲ್ಲಿ ತೈಲ ಬೆಲೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದ್ದು, ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.





