ಜೆರುಸೇಲಂ: ಇರಾನ್-ಇಸ್ರೇಲ್ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಹೋರಾಟ ನಿಲ್ಲಿಸುವಂತೆ ಹಲವು ಕರೆಗಳು ಬಂದಿದ್ದರೂ, ಎರಡೂ ದೇಶಗಳು ಹಿಂದೆ ಸರಿಯದೇ ಸಂಘರ್ಷ ಮುಂದುವರಿಸಿವೆ. ಜನಸಂಖ್ಯಾ ಕೇಂದ್ರಗಳ ಮೇಲೆ ಇಸ್ರೇಲ್ ತೀವ್ರವಾದ ವೈಮಾನಿಕ ದಾಳಿ ನಡೆಸಿದೆ ಎಂದು ಇರಾನ್ ಹೇಳಿದೆ.
ಇಂದು ಬೆಳಿಗ್ಗೆ ಟೆಹರಾನ್ನ ವಿವಿಧೆಡೆಯೂ ಸ್ಫೋಟ ಸಂಭವಿಸಿದ್ದು, ಸಂಘರ್ಷದಲ್ಲಿ ದೇಶದಲ್ಲಿ 224 ಮಂದಿ ಮೃತಪಟ್ಟಿದ್ದು, 1,277ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಸ್ರೇಲ್ ವಿರುದ್ಧ ಕೆಂಡಕಾರಿರುವ ಇರಾನ್ ಹಲವು ಡ್ರೋನ್ಗಳನ್ನು ಹಾರಿಸಿದೆ. ಇರಾನ್ ಪರಮಾಣು ಯೋಜನೆಯಲ್ಲಿ ಭಾಗಿಯಾಗಿರುವ ಹಲವು ವಿಜ್ಞಾನಿಗಳು ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ಭಾರತದಲ್ಲಿ ತೈಲ ಬೆಲೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದ್ದು, ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…