ದೇಶ- ವಿದೇಶ

ಅಮೆರಿಕ-ಯುಕೆ ಸೇನಾನೆಲೆ ಮೇಲೆ ಇರಾನ್ ದಾಳಿ‌ ; ವರದಿ

ಟೆಹ್ರಾನ್  : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ ತನ್ನ ಯುದ್ಧ ಮಾದರಿಯನ್ನೇ ಬದಲಿಸಿದ್ದು, ನೇರವಾಗಿ ಅಮೆರಿಕ ಬುಡಕ್ಕೇ ಬೆಂಕಿ ಇಟ್ಟಿದೆ.

ಇರಾನ್ ತನ್ನ ದಾಳಿ ತೀವ್ರತೆಯನ್ನು ಹೆಚ್ಚಿಸಿದ್ದು, ಬರೊಬ್ಬರಿ 4,000 ಕಿಮೀ ದೂರದಲ್ಲಿರುವ ಡಿಯಾಗೋ ಗಾರ್ಸಿಯಾದಲ್ಲಿರುವ ಅಮೆರಿಕ-ಯುಕೆ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ.

ಇರಾನ್ ಇಷ್ಟು ದೂರದ ಗುರಿಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿರುವುದು ಇತಿಹಾಸದಲ್ಲೇ ಮೊದಲು ಎಂದು ಹೇಳಲಾಗಿದೆ. ಅಂತೆಯೇ ಇದು ದೀರ್ಘ ದಾಳಿಯ ಸಾಧ್ಯತೆಯನ್ನು ಸೂಚಿಸುತ್ತದೆ ಎನ್ನಲಾಗಿದೆ.

ಇರಾನ್ ಇತ್ತೀಚೆಗೆ ಹಿಂದೂ ಮಹಾಸಾಗರದ ಡಿಯಾಗೋ ಗಾರ್ಸಿಯಾದಲ್ಲಿರುವ ಅಮೆರಿಕ-ಬ್ರಿಟನ್ ಜಂಟಿ ಮಿಲಿಟರಿ ನೆಲೆಯ ಮೇಲೆ ತನ್ನ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಹೇಳಿಕೊಂಡಿತ್ತು. ಆದರೆ ಈ ದಾಳಿಯನ್ನು ಅಮೆರಿಕದ ಅಧಿಕಾರಿಗಳು ತಳ್ಳಿಹಾಕಿದ್ದರು ಎಂದು ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್ ಸ್ಟ್ರೀಟ್ ಜರ್ನಲ್ ಶುಕ್ರವಾರ ವರದಿ ಮಾಡಿತ್ತು.

ವರದಿಗಳ ಪ್ರಕಾರ ಇರಾನ್ ಸುಮಾರು 4 ಸಾವಿರ ಕಿ.ಮೀ ವ್ಯಾಪ್ತಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದ್ದಂತೂ ನಿಜ. ಆದರೆ ಈ ಕ್ಷಿಪಣಿಗಳು ಇರಾನ್ ಪ್ರದೇಶದಿಂದ ಸುಮಾರು 2,500 ಮೈಲುಗಳು (4,000 ಕಿಲೋಮೀಟರ್) ದೂರದಲ್ಲಿರುವ ಗುರಿಯನ್ನು ತಲುಪಿಲ್ಲ, ಆದರೆ ಈ ಉಡಾವಣೆಯು ಟೆಹ್ರಾನ್ ಹಿಂದೆ ಭಾವಿಸಿದ್ದಕ್ಕಿಂತ ಹೆಚ್ಚಿನ ವ್ಯಾಪ್ತಿಯ ಕ್ಷಿಪಣಿಗಳನ್ನು ಹೊಂದಿದೆ ಎಂದು ಸೂಚಿಸುತ್ತದೆ ಎಂದು ವರದಿ ತಿಳಿಸಿದೆ.

ಇರಾನ್ ಹಾರಿಸಿದ 2 ಕ್ಷಿಪಣಿಗಳ ಪೈಕಿ ಒಂದು ಹಾರಾಟದಲ್ಲಿ ವಿಫಲವಾದರೆ, ಮತ್ತೊಂದನ್ನು ಅಮೆರಿಕ ನೌಕಾಪಡೆಯ ಯುದ್ಧನೌಕೆಯಿಂದ ಹಾರಿಸಿದ ಇಂಟರ್‌ಸೆಪ್ಟರ್ ಗುರಿಯಾಗಿಸಿಕೊಂಡು ದಾಳಿ ಮಾಡಿ ಅದನ್ನು ನಾಶ ಮಾಡಿತು. ಆದರೂ ಕ್ಷಿಪಣಿಯನ್ನು ಹೊಡೆದಿದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ದಿ ಜರ್ನಲ್ ವರದಿ ಮಾಡಿದೆ. ಅಂದಹಾಗೆ ಚಾಗೋಸ್ ದ್ವೀಪಗಳಲ್ಲಿರುವ ಡಿಯಾಗೋ ಗಾರ್ಸಿಯಾ ಬ್ರಿಟನ್ ಇರಾನ್‌ನಲ್ಲಿ ‘ರಕ್ಷಣಾತ್ಮಕ‘ ಕಾರ್ಯಾಚರಣೆಗಳಿಗೆ ಯುನೈಟೆಡ್ ಸ್ಟೇಟ್ಸ್ ಬಳಸಲು ಅನುಮತಿಸುತ್ತಿರುವ ಎರಡು ನೆಲೆಗಳಲ್ಲಿ ಒಂದಾಗಿದೆ.

ಅಮೆರಿಕದ ಪಡೆಗಳು ಅಫ್ಘಾನಿಸ್ತಾನ ಮತ್ತು ಇರಾಕ್‌ನಲ್ಲಿ ಅಮೆರಿಕ ಬಾಂಬ್ ದಾಳಿ ಸೇರಿದಂತೆ ಏಷ್ಯಾ ಕಾರ್ಯಾಚರಣೆಗಳ ಪ್ರಮುಖ ಕೇಂದ್ರವಾದ ಈ ನೆಲೆಯಲ್ಲಿ ಬಾಂಬರ್‌ಗಳು ಮತ್ತು ಇತರ ಉಪಕರಣಗಳನ್ನು ಇರಿಸಿವೆ.

 

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

9 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

13 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

15 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

16 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

17 hours ago