ಟೆಹ್ರಾನ್ : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ ತನ್ನ ಯುದ್ಧ ಮಾದರಿಯನ್ನೇ ಬದಲಿಸಿದ್ದು, ನೇರವಾಗಿ ಅಮೆರಿಕ ಬುಡಕ್ಕೇ ಬೆಂಕಿ ಇಟ್ಟಿದೆ.
ಇರಾನ್ ತನ್ನ ದಾಳಿ ತೀವ್ರತೆಯನ್ನು ಹೆಚ್ಚಿಸಿದ್ದು, ಬರೊಬ್ಬರಿ 4,000 ಕಿಮೀ ದೂರದಲ್ಲಿರುವ ಡಿಯಾಗೋ ಗಾರ್ಸಿಯಾದಲ್ಲಿರುವ ಅಮೆರಿಕ-ಯುಕೆ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ.
ಇರಾನ್ ಇಷ್ಟು ದೂರದ ಗುರಿಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿರುವುದು ಇತಿಹಾಸದಲ್ಲೇ ಮೊದಲು ಎಂದು ಹೇಳಲಾಗಿದೆ. ಅಂತೆಯೇ ಇದು ದೀರ್ಘ ದಾಳಿಯ ಸಾಧ್ಯತೆಯನ್ನು ಸೂಚಿಸುತ್ತದೆ ಎನ್ನಲಾಗಿದೆ.
ಇರಾನ್ ಇತ್ತೀಚೆಗೆ ಹಿಂದೂ ಮಹಾಸಾಗರದ ಡಿಯಾಗೋ ಗಾರ್ಸಿಯಾದಲ್ಲಿರುವ ಅಮೆರಿಕ-ಬ್ರಿಟನ್ ಜಂಟಿ ಮಿಲಿಟರಿ ನೆಲೆಯ ಮೇಲೆ ತನ್ನ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಹೇಳಿಕೊಂಡಿತ್ತು. ಆದರೆ ಈ ದಾಳಿಯನ್ನು ಅಮೆರಿಕದ ಅಧಿಕಾರಿಗಳು ತಳ್ಳಿಹಾಕಿದ್ದರು ಎಂದು ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್ ಸ್ಟ್ರೀಟ್ ಜರ್ನಲ್ ಶುಕ್ರವಾರ ವರದಿ ಮಾಡಿತ್ತು.
ವರದಿಗಳ ಪ್ರಕಾರ ಇರಾನ್ ಸುಮಾರು 4 ಸಾವಿರ ಕಿ.ಮೀ ವ್ಯಾಪ್ತಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದ್ದಂತೂ ನಿಜ. ಆದರೆ ಈ ಕ್ಷಿಪಣಿಗಳು ಇರಾನ್ ಪ್ರದೇಶದಿಂದ ಸುಮಾರು 2,500 ಮೈಲುಗಳು (4,000 ಕಿಲೋಮೀಟರ್) ದೂರದಲ್ಲಿರುವ ಗುರಿಯನ್ನು ತಲುಪಿಲ್ಲ, ಆದರೆ ಈ ಉಡಾವಣೆಯು ಟೆಹ್ರಾನ್ ಹಿಂದೆ ಭಾವಿಸಿದ್ದಕ್ಕಿಂತ ಹೆಚ್ಚಿನ ವ್ಯಾಪ್ತಿಯ ಕ್ಷಿಪಣಿಗಳನ್ನು ಹೊಂದಿದೆ ಎಂದು ಸೂಚಿಸುತ್ತದೆ ಎಂದು ವರದಿ ತಿಳಿಸಿದೆ.
ಇರಾನ್ ಹಾರಿಸಿದ 2 ಕ್ಷಿಪಣಿಗಳ ಪೈಕಿ ಒಂದು ಹಾರಾಟದಲ್ಲಿ ವಿಫಲವಾದರೆ, ಮತ್ತೊಂದನ್ನು ಅಮೆರಿಕ ನೌಕಾಪಡೆಯ ಯುದ್ಧನೌಕೆಯಿಂದ ಹಾರಿಸಿದ ಇಂಟರ್ಸೆಪ್ಟರ್ ಗುರಿಯಾಗಿಸಿಕೊಂಡು ದಾಳಿ ಮಾಡಿ ಅದನ್ನು ನಾಶ ಮಾಡಿತು. ಆದರೂ ಕ್ಷಿಪಣಿಯನ್ನು ಹೊಡೆದಿದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ದಿ ಜರ್ನಲ್ ವರದಿ ಮಾಡಿದೆ. ಅಂದಹಾಗೆ ಚಾಗೋಸ್ ದ್ವೀಪಗಳಲ್ಲಿರುವ ಡಿಯಾಗೋ ಗಾರ್ಸಿಯಾ ಬ್ರಿಟನ್ ಇರಾನ್ನಲ್ಲಿ ‘ರಕ್ಷಣಾತ್ಮಕ‘ ಕಾರ್ಯಾಚರಣೆಗಳಿಗೆ ಯುನೈಟೆಡ್ ಸ್ಟೇಟ್ಸ್ ಬಳಸಲು ಅನುಮತಿಸುತ್ತಿರುವ ಎರಡು ನೆಲೆಗಳಲ್ಲಿ ಒಂದಾಗಿದೆ.
ಅಮೆರಿಕದ ಪಡೆಗಳು ಅಫ್ಘಾನಿಸ್ತಾನ ಮತ್ತು ಇರಾಕ್ನಲ್ಲಿ ಅಮೆರಿಕ ಬಾಂಬ್ ದಾಳಿ ಸೇರಿದಂತೆ ಏಷ್ಯಾ ಕಾರ್ಯಾಚರಣೆಗಳ ಪ್ರಮುಖ ಕೇಂದ್ರವಾದ ಈ ನೆಲೆಯಲ್ಲಿ ಬಾಂಬರ್ಗಳು ಮತ್ತು ಇತರ ಉಪಕರಣಗಳನ್ನು ಇರಿಸಿವೆ.
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…