ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಗೆ ವ್ಯಾಪಿಸಿದೆ.
ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ವಿಶ್ವದ ಒಟ್ಟು ಬಳಕೆಯ ಐದನೇ ಒದು ಭಾಗವನ್ನು ತೈಲ ಮತ್ತು ಭಾರೀ ಪ್ರಮಾಣದ ನೈಸರ್ಗಿಕ ಅನಿಲವನ್ನು ಸಾಗಿಸುವ ಈ ಜಲಸಂಧಿಯ ಮೂಲಕ ನಡೆಯುವ ಹಡಗು ಸಂಚಾರವು ಈಗ ಬಹುತೇಕ ಸ್ಥಗಿತಗೊಂಡಿದೆ. ಈ ಪ್ರದೇಶದಲ್ಲಿ ತೈಲ ಟ್ಯಾಂಕರ್ಗಳ ಮೇಲೆ ಇರಾನ್ ನಡೆಸುತ್ತಿರುವ ದಾಳಿಗಳಿಂದಾಗಿ ಇಂತಹ ಗಂಭೀರ ಪರಿಸ್ಥಿತಿ ಉಂಟಾಗಿದೆ.
ಇನ್ನು ಇರಾನ್ ಮತ್ತು ಒಮಾನ್ ದೇಶಗಳನ್ನು ಬೇರ್ಪಡಿಸುವ ಈ ಜಲಸಂಧಿಯ ಸುತ್ತ ಕನಿಷ್ಠ ಐದು ಟ್ಯಾಂಕರ್ಗಳು ಹಾನಿಗೊಳಗಾಗಿವೆ. ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸುಮಾರು 150 ಹಡಗುಗಳು ಮಧ್ಯದಾರಿಯಲ್ಲೇ ಸಿಲುಕಿಕೊಂಡಿವೆ ಎಂದು ಅಲ್-ಜಝೀರಾ ವರದಿ ಮಾಡಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…