ದೇಶ- ವಿದೇಶ

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ ಹಾರ್ಮುಜ್‌ ಜಲಸಂಧಿಗೆ ವ್ಯಾಪಿಸಿದೆ.

ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.

ವಿಶ್ವದ ಒಟ್ಟು ಬಳಕೆಯ ಐದನೇ ಒದು ಭಾಗವನ್ನು ತೈಲ ಮತ್ತು ಭಾರೀ ಪ್ರಮಾಣದ ನೈಸರ್ಗಿಕ ಅನಿಲವನ್ನು ಸಾಗಿಸುವ ಈ ಜಲಸಂಧಿಯ ಮೂಲಕ ನಡೆಯುವ ಹಡಗು ಸಂಚಾರವು ಈಗ ಬಹುತೇಕ ಸ್ಥಗಿತಗೊಂಡಿದೆ. ಈ ಪ್ರದೇಶದಲ್ಲಿ ತೈಲ ಟ್ಯಾಂಕರ್‌ಗಳ ಮೇಲೆ ಇರಾನ್‌ ನಡೆಸುತ್ತಿರುವ ದಾಳಿಗಳಿಂದಾಗಿ ಇಂತಹ ಗಂಭೀರ ಪರಿಸ್ಥಿತಿ ಉಂಟಾಗಿದೆ.

ಇನ್ನು ಇರಾನ್‌ ಮತ್ತು ಒಮಾನ್‌ ದೇಶಗಳನ್ನು ಬೇರ್ಪಡಿಸುವ ಈ ಜಲಸಂಧಿಯ ಸುತ್ತ ಕನಿಷ್ಠ ಐದು ಟ್ಯಾಂಕರ್‌ಗಳು ಹಾನಿಗೊಳಗಾಗಿವೆ. ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸುಮಾರು 150 ಹಡಗುಗಳು ಮಧ್ಯದಾರಿಯಲ್ಲೇ ಸಿಲುಕಿಕೊಂಡಿವೆ ಎಂದು ಅಲ್-ಜಝೀರಾ ವರದಿ ಮಾಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

13 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

14 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago