ದೇಶ- ವಿದೇಶ

ಇರಾನ್‌ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ : 50 ಕಾರ್ಮಿಕರು ದುರ್ಮರಣ

ಇರಾನ್‌: ಇರಾನ್‌ ದೇಶದ ತಬಾಸ್‌ನಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿರುವ ಸ್ಫೋಟದಲ್ಲಿ 50 ಜನ ಸಾವನ್ನಪ್ಪಿದ್ದು, 17ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತಬಾಸ್‌ನಲ್ಲಿ ಮಿಥೇನ್‌ ಅನಿಲ ಸೋರಿಕೆಯಿಂದ ಈ ದುರಂತ ಸಂಭವಿಸಿದ್ದು, ಸ್ಫೋಟದ ನಂತರ ಮೂವರು ಗಣಿಯಲ್ಲೇ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇರಾನ್‌ ರಾಜಧಾನಿ ತೆಹ್ರಾನ್‌ನಿಂದ ಸುಮಾರು 540 ಕಿ.ಮೀ.ದೂರದಲ್ಲಿ ಈ ದುರಂತ ಸಂಭವಿಸಿದೆ. ಅಲ್ಲದೇ ಅಂದಾಜು 70 ಜನ ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುತ್ತಿರುವಾಗಲೇ ಈ ಅನಾಹುತ ನಡೆದಿದೆ ಎನ್ನಲಾಗಿದೆ.

ಇರಾನ್‌ನ ಪ್ರಾಂತೀಯ ಗವರ್ನರ್‌ ಮೊಹಮ್ಮದ್‌ ಜಾವಾದ್‌ ಕೆನಾಟ್‌ ಅವರು ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಮತ್ತು ಗಾಯಾಳುಗಳ ಸಂಖ್ಯೆಯನ್ನು ರಾಜ್ಯ ಮಾಧ್ಯಮಕ್ಕೆ ನೀಡಿದ ವರದಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಈ ಘಟನಾವಳಿಗೆ ಸಂಬಂಧಿಸಿದಂತೆ ಇರಾನ್‌ನ ನೂತನ ಅಧ್ಯಕ್ಷ ಮಸೌದ್‌ ಪೆಜೆಶ್ಕಿಯಾನ್‌ ಅವರು ಮಾತನಾಡಿ, ಘಟನೆಯಲ್ಲಿ ಅನೇಕ ದೇಶವಾಸಿಗಳು ಮರಣ ಹೊಂದಿದ್ದಾರೆ. ಅವರ ಕುಟುಂಬಗಳಿಗೆ ನಾನು ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದರು.

ನಂತರ ತಬಾಸ್‌ನ ಕಲ್ಲಿದ್ದಲು ಗಣಿಯೊಂದರಲ್ಲಿ ಸಿಕ್ಕಿಬಿದ್ದವರನ್ನು ರಕ್ಷಿಸಲು ಹಾಗೂ ಮರಣ ಹೊಂದಿರುವ ಮೃತರ ಕುಟುಂಬಗಳಿಗೆ ನೆರವು ಈಗಾಗಲೇ ಸೂಚಿಸಲಾಗಿದೆ. ಜೊತೆಗೆ ಈ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

1 hour ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

7 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

7 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

8 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

8 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

13 hours ago