ದೇಶ- ವಿದೇಶ

ಇರಾನ್-ಇಸ್ರೇಲ್‌ ಸಂಘರ್ಷ: 9 ವಾಯುಪ್ರದೇಶಗಳಲ್ಲಿ ವಿಮಾನ ಹಾರಾಟ ನಡೆಸದಂತೆ DGCA ಸೂಚನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ಗಲ್ಪ್ ಪ್ರದೇಶದಲ್ಲಿನ 9 ವಾಯು ಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಿದೆ.

ಬಹ್ರೇನ್ ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಾಯುಪ್ರದೇಶಗಳನ್ನು ತಪ್ಪಿಸುವಂತೆ ಡಿಜಿಸಿಎ ಕೇಳಿಕೊಂಡಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ಕೆಲವು ಷರತ್ತುಗಳಿಗೆ ಒಳಪಟ್ಟು ಒಮನ್ ಮತ್ತು ಸೌದಿ ಅರೇಬಿಯಾ ವಾಯುಪ್ರದೇಶಗಳ ಮೇಲೆ ಹಾರಾಟ ನಡೆಸಬಹುದು ಎಂದು ನಿಯಂತ್ರಕ ತಿಳಿಸಿದೆ.

ವಾಯುಪ್ರದೇಶದೊಳಗೆ ಎಫ್‍ಎಲ್ 320 ಅಥವಾ 32,000 ಅಡಿಗಳಿಗಿಂತ ಕಡಿಮೆ ಕಾರ್ಯನಿರ್ವಹಿಸದಂತೆ ವಿಮಾನಯಾನ ಸಂಸ್ಥೆಗಳಿಗೆ ತಿಳಿಸಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ಕೆಲವು ಷರತ್ತುಗಳಿಗೆ ಒಳಪಟ್ಟು ಒಮಾನ್ ಮತ್ತು ಸೌದಿ ಅರೇಬಿಯಾ ವಾಯುಪ್ರದೇಶಗಳ ಮೇಲೆ ಹಾರಾಟ ನಡೆಸಬಹುದು. ಇರಾನ್‍ನಲ್ಲಿನ ಗುರಿಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ಇತ್ತೀಚೆಗೆ ನಡೆಸಿದ ಮಿಲಿಟರಿ ದಾಳಿಗಳು ನಾಗರಿಕ ವಿಮಾನಯಾನಕ್ಕೆ ಹೆಚ್ಚಿನ ಅಪಾಯದ ವಾತಾವರಣವನ್ನು ಸೃಷ್ಟಿಸಿವೆ ಎಂದು ಡಿಜಿಸಿಎ ಹೇಳಿದೆ.

ಇದರ ಜೊತೆಗೆ, ಒಮನ್ ಮತ್ತು ಸೌದಿ ಅರೇಬಿಯಾ ವಾಯುಪ್ರದೇಶಗಳ ಮೇಲೆ ಹಾರಾಟ ನಡೆಸಲು ಕೆಲವು ನಿರ್ಬಂಧಗಳೊಂದಿಗೆ ಅವಕಾಶ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಹಾರಾಟ ನಡೆಸುವ ವಿಮಾನಗಳು 32,000 ಅಡಿ ಗಿಂತ ಕಡಿಮೆ ಎತ್ತರದಲ್ಲಿ ಹಾರಬಾರದು ಎಂಬ ಕಟ್ಟುನಿಟ್ಟಿನ ನಿಯಮವನ್ನು ಜಾರಿಗೊಳಿಸಲಾಗಿದೆ. ಈ ನಿಯಮ ತಕ್ಷಣದಿಂದ ಜಾರಿಗೆ ಬಂದಿದ್ದು, ಮಾರ್ಚ್ 28ರವರೆಗೆ ಮುಂದುವರಿಯಲಿದೆ.

ಇರಾನ್‍ನ ಪ್ರಮುಖ ಗುರಿಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಗಳು, ಹಾಗೆಯೇ ಇರಾನ್ ಘೋಷಿಸಿರುವ ಪ್ರತೀಕಾರದ ಕ್ರಮಗಳು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿವೆ. ಕ್ಷಿಪಣಿ ದಾಳಿ, ಡ್ರೋನ್ ಹಾರಾಟ ಹಾಗೂ ವಾಯು ರಕ್ಷಣಾ ವ್ಯವಸ್ಥೆಗಳ ಸಕ್ರಿಯತೆಯಿಂದ ನಾಗರಿಕ ವಿಮಾನಗಳಿಗೆ ಅಪಾಯ ಹೆಚ್ಚಾಗಿದೆ. ಈ ಹಿನ್ನೆಲೆ ಆಉಅಂ ಮುನ್ನೆಚ್ಚರಿಕೆಯಾಗಿ ಈ ಮಾರ್ಗಸೂಚಿ ಹೊರಡಿಸಿದೆ.

ಮಧ್ಯಪ್ರಾಚ್ಯದ ಈ ಉದ್ವಿಗ್ನ ಪರಿಸ್ಥಿತಿ ಜಾಗತಿಕ ಮಟ್ಟದಲ್ಲಿಯೂ ಪರಿಣಾಮ ಬೀರುತ್ತಿದೆ. ಕತಾರ್‍ನ ನೈಸರ್ಗಿಕ ಅನಿಲ ಘಟಕದ ಮೇಲೆ ನಡೆದ ದಾಳಿಯ ಪರಿಣಾಮವಾಗಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಎದುರಾಗಿದೆ. ಭಾರತ ಮತ್ತು ಚೀನಾ ಸೇರಿದಂತೆ ಅನೇಕ ದೇಶಗಳು ಕತಾರ್‍ನ ಅನಿಲವನ್ನು ಅವಲಂಬಿಸಿಕೊಂಡಿರುವುದರಿಂದ, ಇಂಧನ ಕ್ಷೇತ್ರದಲ್ಲಿ ಒತ್ತಡ ಹೆಚ್ಚುವ ಆತಂಕ ವ್ಯಕ್ತವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

7 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

9 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

17 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

17 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago