ದೇಶ- ವಿದೇಶ

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ ಎನ್ನುವುದು ಇರಲಿ ಅದರ ಅಸಲಿ ಗುರಿ ಏನು ಎನ್ನುವುದೇ ದಿನ ದಿನಕ್ಕೆ ಬದಲಾಗುವುದು ಕಾಣುತ್ತದೆ.

ಈ ಕದನದ ಆದಿಯಿಂದಲೂ ಅಧ್ಯಕ್ಷ ಟ್ರಂಪ್ ಮತ್ತು ಅವರ ಆಡಳಿತ ದಿನಕ್ಕೊಂದು ವಾದ ಮಂಡಿಸುತ್ತಿದೆ. ಮೊದಲು, ಟ್ರಂಪ್ ಇರಾನ್ ಮೇಲಿನ ದಾಳಿಯನ್ನು ಇದು ಅಣುಬಾಂಬ್ ತಡೆಯುವ ಪ್ರಯತ್ನ ಎಂದಿದ್ದರು. ನಂತರ, ಖಮೇನಿ ಹತ್ಯೆಯಾದ ಮೇಲೆ ಆಡಳಿತ ಬದಲಾವಣೆಯೇ ನಮ್ಮ ಗುರಿ ಎಂದರು. ಈಗ ಅಂತರ ರಾಷ್ಟ್ರೀಯ ತೈಲ ಮಾರುಕಟ್ಟೆಯನ್ನು ಉಳಿಸುವ ವಿಚಾರ ಮಾತನಾಡುತ್ತಿದ್ದಾರೆ.

ಕಾಲಮಿತಿಯ ವಿಷಯದಲ್ಲೂ ಇದೇ ಗೊಂದಲ. ಕಳೆದ ವಾರ “ಯುದ್ಧ ಮುಗಿಯಲು ನಾಲ್ಕರಿಂದ ಐದು ವಾರ” ಬೇಕು ಎಂದಿದ್ದ ಟ್ರಂಪ್, ಸೋಮವಾರದ ಹೊತ್ತಿಗೆ “ಯುದ್ಧ ಬಹುತೇಕ ಮುಗಿದಿದೆ” ಎಂದಿದ್ದಾರೆ. ಆದರೆ ಅದೇ ಸಮಯದಲ್ಲಿ ಅಮೆರಿಕದ ರಕ್ಷಣಾ ಇಲಖೆ, ಇರಾನ್ ಮೇಲಿನ ದಾಳಿ ಮತ್ತಷ್ಟು ತೀವ್ರಗೊಳಿಸುವ ಮಾತನ್ನಾಡುತ್ತಿದೆ.

ಈ ಬದಲಾಗುತ್ತಿರುವ ನಿಲುವುಗಳು ಮತ್ತು ಮೈಲಿಗಲ್ಲುಗಳು ಇಡೀ ಜಗತ್ತನ್ನು ಆತಂಕಕ್ಕೆ ತಳ್ಳಿವೆ. ಯುದ್ಧ ಬಹುಮಟ್ಟಿಗೆ ಮುಗಿದಿದೆ ನಾವೇ ಗೆದ್ದಿದ್ದೇವೆ ಎಂದು ಒಂದು ಕಡೆ ಹೇಳುವವರೇ, ಮತ್ತೊಂದೆಡೆ ಅಂತರಾಷ್ಟ್ರೀಯ ತೈಲ ಸಾಗಣೆಯನ್ನು ಇರಾನ್ ತಡೆದರೆ ಅದರ ಮೇಲೆ 20 ಪಟ್ಟು ಹೆಚ್ಚು ದಾಳಿ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ.

ಈ ಗೊಂದಲದ ಹಾದಿ ಎಲ್ಲಿಗೆ ಹೋಗಿ ಮುಟ್ಟುತ್ತದೋ ಕಾದು ನೋಡಬೇಕು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

4 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

4 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

4 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

4 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

4 hours ago