ದೇಶ- ವಿದೇಶ

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ.

ತೈಲ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿದ್ದು, ದೆಹಲಿ, ಕೋಲ್ಕತ್ತಾ, ಮುಂಬೈ, ಮತ್ತು ಚೆನ್ನೈನಂತಹ ಪ್ರಮುಖ ನಗರಗಳಲ್ಲಿ ದರಗಳು ಕಡಿಮೆಯಾಗಿದ್ದು, ಹೊಸ ದರಗಳು ಭಾನುವಾರದಿಂದಲೇ ಜಾರಿಗೆ ಬಂದಿವೆ.

ಇಂದು ವಾಣಿಜ್ಯ ಬಳಕೆಯ 19 ಕೆಜಿಯ ಸಿಲಿಂಡರ್ ಬೆಲೆಯಲ್ಲಿ 28 ರಿಂದ 31 ರೂ.ಗಳಷ್ಟು ಕಡಿಮೆಯಾಗಿದ್ದು, ಈ ಬೆಲೆಗಳು ನಗರದಿಂದ ನಗರಕ್ಕೆ ವ್ಯತ್ಯಾಸವಾಗಿರುತ್ತದೆ. ಗೃಹ ಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 28 ರೂ.ಗಳಷ್ಟು ಕಡಿಮೆಯಾಗಿದೆ. ಫೆಬ್ರವರಿಯಲ್ಲಿ 1768.5 ರೂ.ಗಳಷ್ಟಿದ್ದ ಕಮರ್ಷಿಯಲ್ ಸಿಲಿಂಡರ್ ಬೆಲೆ ಈ ತಿಂಗಳು 1740.5 ರೂ.ಗಳಿಗೆ ಇಳಿಕೆಯಾಗಿದೆ.

ಅಂತೆಯೇ ಕೋಲ್ಕತ್ತಾದಲ್ಲಿ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 31 ರೂ.ಗಳಷ್ಟು ಇಳಿಕೆಯಾಗಿದೆ. 1875.5 ರೂ.ಗಳಿಗೆ ಸಿಗುತ್ತಿದ್ದ ಎಲ್‌ಪಿಜಿ ಸಿಲಿಂಡರ್ 1844.5 ರೂ.ಗೆ ಲಭ್ಯವಾಗಲಿದೆ. ಮುಂಬೈ ಮತ್ತು ಚೆನ್ನೈನಲ್ಲಿ ಕ್ರಮವಾಗಿ 28.5 ಮತ್ತು 29.5 ರೂ.ಗಳಷ್ಟು ಕುಸಿತವಾಗಿದೆ.

ಬೆಂಗಳೂರಿನಲ್ಲೂ ಎಲ್‌ಪಿಜಿ ಸಿಲಿಂಡರ್ ಬೆಲೆ ಕಡಿಮೆಯಾಗಿದ್ದು, ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆ 855 ರೂಪಾಯಿಗಳಷ್ಟಿದ್ದರೆ, ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ: 1841 ರೂಪಾಯಿಗೆ ಕುಸಿದಿದೆ.

ಎಲ್‌ಪಿಜಿ ಬೆಲೆಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್, ಎಚ್ಪಿಸಿಎಲ್ ಮತ್ತು ಬಿಪಿಸಿಎಲ್‌ನಂತಹ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ನಿರ್ಧರಿಸುತ್ತವೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

4 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

4 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

5 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

6 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

7 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

7 hours ago