ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ್ ಮುಂದುವರಿದಿರುವ ಹಿನ್ನೆಲೆಯಲ್ಲಿ 52,000 ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ.
ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ವಿದೇಶಗಳಲ್ಲಿ ಭಾರತೀಯ ಪ್ರಜೆಗಳ ಕ್ಷೇಮ ಹಾಗೂ ಸುರಕ್ಷತೆ ಮೊದಲ ಆದ್ಯತೆ. ಸಹಾಯದ ಅಗತ್ಯ ವಿರುವ ಎಲ್ಲರಿಗೂ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಪಶ್ಚಿಮ ಏಷ್ಯಾ ಪ್ರದೇಶದಲ್ಲಿರುವ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದೆ.
ಮಾರ್ಚ್.1ರಿಂದ 7ರವರೆಗೆ 52,000ಕ್ಕೂ ಹೆಚ್ಚು ಭಾರತೀಯರು ಗಲ್ಫ್ ದೇಶಗಳಿಂದ ಭಾರತಕ್ಕೆ ಸುರಕ್ಷಿತವಾಗಿ ಆಗಮಿಸಿದ್ದಾರೆ ಎಂದು ತಿಳಿಸಿದೆ.





