ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ.
ದೇಶದ ಸದ್ಯದ ಪರಿಸ್ಥಿತಿ ಅವಲೋಕಿಸಿದ ಪ್ರಧಾನಿ ಭವಿಷ್ಯದಲ್ಲಿ ಭಾರತದ ಮೇಲಾಗುವ ಪರಿಣಾಮ ಹಾಗೂ ಸರ್ಕಾರ ಜನಹಿತಕ್ಕಾಗಿ ಕೈಗೊಳ್ಳಬಹುದಾದ ಪರಿಹಾರ, ಪರ್ಯಾಯ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೇ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಒಳಗೊಂಡಂತೆ ಹಿರಿಯ ಸಚಿವರುಗಳ ತಂಡ ಸಹ ರಚಿಸಿದ್ದಾರೆ.
ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಖಾರಿಫ್ ಋತುವಿನಲ್ಲಿ ರೈತರ ಮೇಲಾಗುವ ಪರಿಣಾಮ ಮತ್ತು ರಸಗೊಬ್ಬರ ಅಗತ್ಯತೆ, ಪೂರೈಕೆ ಬಗ್ಗೆ ನಿರ್ಣಯ ಕೈಗೊಂಡರು. ಅಲ್ಲದೇ, ರಸಗೊಬ್ಬರ ದಾಸ್ತಾನು, ಲಭ್ಯತೆ ಹಾಗೂ ಪರ್ಯಾಯ ಮೂಲಗಳ ಕುರಿತು ಚರ್ಚೆ ನಡೆಸಿದ್ದಾರೆ.
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…
ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ…