ವಾಷಿಂಗ್ಟನ್ : ಇರಾನ್ ಹಾಗೂ ಇಸ್ರೇಲ್ ಸೋಮವಾರ ಮಧ್ಯರಾತ್ರಿಯವರೆಗೂ ಪರಸ್ಪರ ಕ್ಷಿಪಣಿ ದಾಳಿ ನಡೆಸುತ್ತಲೇ ಇತ್ತು. ಈ ನಡುವೇ ಎರಡು ದೇಶಗಳಿಗೂ ಮಾಹಿತಿ ಇಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಕದನ ವಿರಾಮ ಘೋಷಿಸಿದ್ದಾರೆ.
ಇರಾನ್ ಹಾಗೂ ಇಸ್ರೇಲ್ ದೇಶಗಳು ನನ್ನ ಬಳಿ ಬಂದು ಶಾಂತಿ ಕೋರಿದರು. ಹೀಗಾಗಿ ಕದಮ ವಿರಾಮಕ್ಕೆ ಇದು ಸರಿಯಾದ ಸಮಯ ಎಂದು ಭಾವಿಸಿ ಉಭಯ ದೇಶಗಳಿಗೆ ಶಾಂತಿ ಸಂದೇಶ ನೀಡಿದ್ದೇನೆ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಟ್ರಂಪ್ ಅವರ ಈ ಘೋಷಣೆ ಜಗತ್ತನ್ನು ಅಚ್ಚರಿಗೊಳಿಸಿದೆ.
ಉಭಯ ರಾಷ್ಟ್ರಗಳು ಭವಿಷ್ಯದಲ್ಲಿ ಪ್ರೀತಿ, ಶಾಂತಿಯೊಂದಿಗೆ ಸಾಕಷ್ಟು ಅವಕಾಶ ಗಳಿಸಲಿ. ಹಲವಾರು ಭರವಸೆ ಕೂಡಿರಲಿ ಎಂದು ಬರೆದುಕೊಂಡಿದ್ದಾರೆ.
ಟ್ರಂಪ್ ಅವರ ಈ ಅಚ್ಚರಿ ಹೇಳಿಕೆಯಿಂದ ಇಸ್ರೇಲ್ ಹೊರಬರಲು ಕೆಲ ಸಮಯ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಘೋಷಣೆಗೂ ಮುನ್ನ ಟ್ರಂಪ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮೂಲಕ ಸಮಾಲೋಚನೆ ನಡೆಸಿದ್ದಾರೆ ಬಳಿಕವೇ ಈ ಘೋಷಣೆ ಮಾಡಿದ್ದಾರೆ. ಆದರೆ, ಟ್ರಂಪ್ ಅವರ ಘೋಷಣೆಯನ್ನು ಅರಗಿಸಿಕೊಳ್ಳಲು ಇರಾನ್ ಕೂಡ ಸಾಕಷ್ಟು ಸಮಯ ತೆಗೆದುಕೊಂಡಿತು ಎಂದು ಮಾದ್ಯಮಗಳು ವರದಿ ಮಾಡಿವೆ.
ಈ ಮೂಲಕ ಉಭಯ ದೇಶಗಳ ನಡುವಿನ ಕದನ ವಿರಾಮದ ಶ್ರೇಯಸ್ಸನ್ನು ಟ್ರಂಪ್ ಪಡೆದುಕೊಂಡಿದ್ದಾರೆ.
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…
• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…
ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…