ದೇಶ- ವಿದೇಶ

ಇರಾನ್‌-ಇಸ್ರೇಲ್‌ ಯುದ್ಧ : ಕದನ ವಿರಾಮ ಘೋಷಿಸಿದ ಟ್ರಂಪ್‌ !

ವಾಷಿಂಗ್ಟನ್‌ : ಇರಾನ್‌ ಹಾಗೂ ಇಸ್ರೇಲ್‌ ಸೋಮವಾರ ಮಧ್ಯರಾತ್ರಿಯವರೆಗೂ ಪರಸ್ಪರ ಕ್ಷಿಪಣಿ ದಾಳಿ ನಡೆಸುತ್ತಲೇ ಇತ್ತು. ಈ ನಡುವೇ ಎರಡು ದೇಶಗಳಿಗೂ ಮಾಹಿತಿ ಇಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಾಮಾಜಿಕ ಮಾಧ್ಯಮದಲ್ಲಿ ಕದನ ವಿರಾಮ ಘೋಷಿಸಿದ್ದಾರೆ.

ಇರಾನ್‌ ಹಾಗೂ ಇಸ್ರೇಲ್‌ ದೇಶಗಳು ನನ್ನ ಬಳಿ ಬಂದು ಶಾಂತಿ ಕೋರಿದರು. ಹೀಗಾಗಿ ಕದಮ ವಿರಾಮಕ್ಕೆ ಇದು ಸರಿಯಾದ ಸಮಯ ಎಂದು ಭಾವಿಸಿ ಉಭಯ ದೇಶಗಳಿಗೆ ಶಾಂತಿ ಸಂದೇಶ ನೀಡಿದ್ದೇನೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಟ್ರಂಪ್‌ ಅವರ ಈ ಘೋಷಣೆ ಜಗತ್ತನ್ನು ಅಚ್ಚರಿಗೊಳಿಸಿದೆ.

ಉಭಯ ರಾಷ್ಟ್ರಗಳು ಭವಿಷ್ಯದಲ್ಲಿ ಪ್ರೀತಿ, ಶಾಂತಿಯೊಂದಿಗೆ ಸಾಕಷ್ಟು ಅವಕಾಶ ಗಳಿಸಲಿ. ಹಲವಾರು ಭರವಸೆ ಕೂಡಿರಲಿ ಎಂದು ಬರೆದುಕೊಂಡಿದ್ದಾರೆ.

ಟ್ರಂಪ್‌ ಅವರ ಈ ಅಚ್ಚರಿ ಹೇಳಿಕೆಯಿಂದ ಇಸ್ರೇಲ್‌ ಹೊರಬರಲು ಕೆಲ ಸಮಯ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಘೋಷಣೆಗೂ ಮುನ್ನ ಟ್ರಂಪ್‌ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮೂಲಕ ಸಮಾಲೋಚನೆ ನಡೆಸಿದ್ದಾರೆ ಬಳಿಕವೇ ಈ ಘೋಷಣೆ ಮಾಡಿದ್ದಾರೆ. ಆದರೆ, ಟ್ರಂಪ್‌ ಅವರ ಘೋಷಣೆಯನ್ನು ಅರಗಿಸಿಕೊಳ್ಳಲು ಇರಾನ್‌ ಕೂಡ ಸಾಕಷ್ಟು ಸಮಯ ತೆಗೆದುಕೊಂಡಿತು ಎಂದು ಮಾದ್ಯಮಗಳು ವರದಿ ಮಾಡಿವೆ.

ಈ ಮೂಲಕ ಉಭಯ ದೇಶಗಳ ನಡುವಿನ ಕದನ ವಿರಾಮದ ಶ್ರೇಯಸ್ಸನ್ನು ಟ್ರಂಪ್‌ ಪಡೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

53 mins ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

1 hour ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

1 hour ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

2 hours ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

2 hours ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

2 hours ago