ದೇಶ- ವಿದೇಶ

ಇರಾನ್‌-ಇಸ್ರೇಲ್‌ ಯುದ್ಧ : ಕದನ ವಿರಾಮ ಘೋಷಿಸಿದ ಟ್ರಂಪ್‌ !

ವಾಷಿಂಗ್ಟನ್‌ : ಇರಾನ್‌ ಹಾಗೂ ಇಸ್ರೇಲ್‌ ಸೋಮವಾರ ಮಧ್ಯರಾತ್ರಿಯವರೆಗೂ ಪರಸ್ಪರ ಕ್ಷಿಪಣಿ ದಾಳಿ ನಡೆಸುತ್ತಲೇ ಇತ್ತು. ಈ ನಡುವೇ ಎರಡು ದೇಶಗಳಿಗೂ ಮಾಹಿತಿ ಇಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಾಮಾಜಿಕ ಮಾಧ್ಯಮದಲ್ಲಿ ಕದನ ವಿರಾಮ ಘೋಷಿಸಿದ್ದಾರೆ.

ಇರಾನ್‌ ಹಾಗೂ ಇಸ್ರೇಲ್‌ ದೇಶಗಳು ನನ್ನ ಬಳಿ ಬಂದು ಶಾಂತಿ ಕೋರಿದರು. ಹೀಗಾಗಿ ಕದಮ ವಿರಾಮಕ್ಕೆ ಇದು ಸರಿಯಾದ ಸಮಯ ಎಂದು ಭಾವಿಸಿ ಉಭಯ ದೇಶಗಳಿಗೆ ಶಾಂತಿ ಸಂದೇಶ ನೀಡಿದ್ದೇನೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಟ್ರಂಪ್‌ ಅವರ ಈ ಘೋಷಣೆ ಜಗತ್ತನ್ನು ಅಚ್ಚರಿಗೊಳಿಸಿದೆ.

ಉಭಯ ರಾಷ್ಟ್ರಗಳು ಭವಿಷ್ಯದಲ್ಲಿ ಪ್ರೀತಿ, ಶಾಂತಿಯೊಂದಿಗೆ ಸಾಕಷ್ಟು ಅವಕಾಶ ಗಳಿಸಲಿ. ಹಲವಾರು ಭರವಸೆ ಕೂಡಿರಲಿ ಎಂದು ಬರೆದುಕೊಂಡಿದ್ದಾರೆ.

ಟ್ರಂಪ್‌ ಅವರ ಈ ಅಚ್ಚರಿ ಹೇಳಿಕೆಯಿಂದ ಇಸ್ರೇಲ್‌ ಹೊರಬರಲು ಕೆಲ ಸಮಯ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಘೋಷಣೆಗೂ ಮುನ್ನ ಟ್ರಂಪ್‌ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮೂಲಕ ಸಮಾಲೋಚನೆ ನಡೆಸಿದ್ದಾರೆ ಬಳಿಕವೇ ಈ ಘೋಷಣೆ ಮಾಡಿದ್ದಾರೆ. ಆದರೆ, ಟ್ರಂಪ್‌ ಅವರ ಘೋಷಣೆಯನ್ನು ಅರಗಿಸಿಕೊಳ್ಳಲು ಇರಾನ್‌ ಕೂಡ ಸಾಕಷ್ಟು ಸಮಯ ತೆಗೆದುಕೊಂಡಿತು ಎಂದು ಮಾದ್ಯಮಗಳು ವರದಿ ಮಾಡಿವೆ.

ಈ ಮೂಲಕ ಉಭಯ ದೇಶಗಳ ನಡುವಿನ ಕದನ ವಿರಾಮದ ಶ್ರೇಯಸ್ಸನ್ನು ಟ್ರಂಪ್‌ ಪಡೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

8 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

9 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

10 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

11 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

15 hours ago