ವಾಷಿಂಗ್ಟನ್ : ಇರಾನ್ ಹಾಗೂ ಇಸ್ರೇಲ್ ಸೋಮವಾರ ಮಧ್ಯರಾತ್ರಿಯವರೆಗೂ ಪರಸ್ಪರ ಕ್ಷಿಪಣಿ ದಾಳಿ ನಡೆಸುತ್ತಲೇ ಇತ್ತು. ಈ ನಡುವೇ ಎರಡು ದೇಶಗಳಿಗೂ ಮಾಹಿತಿ ಇಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಕದನ ವಿರಾಮ ಘೋಷಿಸಿದ್ದಾರೆ.
ಇರಾನ್ ಹಾಗೂ ಇಸ್ರೇಲ್ ದೇಶಗಳು ನನ್ನ ಬಳಿ ಬಂದು ಶಾಂತಿ ಕೋರಿದರು. ಹೀಗಾಗಿ ಕದಮ ವಿರಾಮಕ್ಕೆ ಇದು ಸರಿಯಾದ ಸಮಯ ಎಂದು ಭಾವಿಸಿ ಉಭಯ ದೇಶಗಳಿಗೆ ಶಾಂತಿ ಸಂದೇಶ ನೀಡಿದ್ದೇನೆ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಟ್ರಂಪ್ ಅವರ ಈ ಘೋಷಣೆ ಜಗತ್ತನ್ನು ಅಚ್ಚರಿಗೊಳಿಸಿದೆ.
ಉಭಯ ರಾಷ್ಟ್ರಗಳು ಭವಿಷ್ಯದಲ್ಲಿ ಪ್ರೀತಿ, ಶಾಂತಿಯೊಂದಿಗೆ ಸಾಕಷ್ಟು ಅವಕಾಶ ಗಳಿಸಲಿ. ಹಲವಾರು ಭರವಸೆ ಕೂಡಿರಲಿ ಎಂದು ಬರೆದುಕೊಂಡಿದ್ದಾರೆ.
ಟ್ರಂಪ್ ಅವರ ಈ ಅಚ್ಚರಿ ಹೇಳಿಕೆಯಿಂದ ಇಸ್ರೇಲ್ ಹೊರಬರಲು ಕೆಲ ಸಮಯ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಘೋಷಣೆಗೂ ಮುನ್ನ ಟ್ರಂಪ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮೂಲಕ ಸಮಾಲೋಚನೆ ನಡೆಸಿದ್ದಾರೆ ಬಳಿಕವೇ ಈ ಘೋಷಣೆ ಮಾಡಿದ್ದಾರೆ. ಆದರೆ, ಟ್ರಂಪ್ ಅವರ ಘೋಷಣೆಯನ್ನು ಅರಗಿಸಿಕೊಳ್ಳಲು ಇರಾನ್ ಕೂಡ ಸಾಕಷ್ಟು ಸಮಯ ತೆಗೆದುಕೊಂಡಿತು ಎಂದು ಮಾದ್ಯಮಗಳು ವರದಿ ಮಾಡಿವೆ.
ಈ ಮೂಲಕ ಉಭಯ ದೇಶಗಳ ನಡುವಿನ ಕದನ ವಿರಾಮದ ಶ್ರೇಯಸ್ಸನ್ನು ಟ್ರಂಪ್ ಪಡೆದುಕೊಂಡಿದ್ದಾರೆ.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…