ವಾಷಿಂಗ್ಟನ್ : ಇರಾನ್ ಹಾಗೂ ಇಸ್ರೇಲ್ ಸೋಮವಾರ ಮಧ್ಯರಾತ್ರಿಯವರೆಗೂ ಪರಸ್ಪರ ಕ್ಷಿಪಣಿ ದಾಳಿ ನಡೆಸುತ್ತಲೇ ಇತ್ತು. ಈ ನಡುವೇ ಎರಡು ದೇಶಗಳಿಗೂ ಮಾಹಿತಿ ಇಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಕದನ ವಿರಾಮ ಘೋಷಿಸಿದ್ದಾರೆ.
ಇರಾನ್ ಹಾಗೂ ಇಸ್ರೇಲ್ ದೇಶಗಳು ನನ್ನ ಬಳಿ ಬಂದು ಶಾಂತಿ ಕೋರಿದರು. ಹೀಗಾಗಿ ಕದಮ ವಿರಾಮಕ್ಕೆ ಇದು ಸರಿಯಾದ ಸಮಯ ಎಂದು ಭಾವಿಸಿ ಉಭಯ ದೇಶಗಳಿಗೆ ಶಾಂತಿ ಸಂದೇಶ ನೀಡಿದ್ದೇನೆ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಟ್ರಂಪ್ ಅವರ ಈ ಘೋಷಣೆ ಜಗತ್ತನ್ನು ಅಚ್ಚರಿಗೊಳಿಸಿದೆ.
ಉಭಯ ರಾಷ್ಟ್ರಗಳು ಭವಿಷ್ಯದಲ್ಲಿ ಪ್ರೀತಿ, ಶಾಂತಿಯೊಂದಿಗೆ ಸಾಕಷ್ಟು ಅವಕಾಶ ಗಳಿಸಲಿ. ಹಲವಾರು ಭರವಸೆ ಕೂಡಿರಲಿ ಎಂದು ಬರೆದುಕೊಂಡಿದ್ದಾರೆ.
ಟ್ರಂಪ್ ಅವರ ಈ ಅಚ್ಚರಿ ಹೇಳಿಕೆಯಿಂದ ಇಸ್ರೇಲ್ ಹೊರಬರಲು ಕೆಲ ಸಮಯ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಘೋಷಣೆಗೂ ಮುನ್ನ ಟ್ರಂಪ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮೂಲಕ ಸಮಾಲೋಚನೆ ನಡೆಸಿದ್ದಾರೆ ಬಳಿಕವೇ ಈ ಘೋಷಣೆ ಮಾಡಿದ್ದಾರೆ. ಆದರೆ, ಟ್ರಂಪ್ ಅವರ ಘೋಷಣೆಯನ್ನು ಅರಗಿಸಿಕೊಳ್ಳಲು ಇರಾನ್ ಕೂಡ ಸಾಕಷ್ಟು ಸಮಯ ತೆಗೆದುಕೊಂಡಿತು ಎಂದು ಮಾದ್ಯಮಗಳು ವರದಿ ಮಾಡಿವೆ.
ಈ ಮೂಲಕ ಉಭಯ ದೇಶಗಳ ನಡುವಿನ ಕದನ ವಿರಾಮದ ಶ್ರೇಯಸ್ಸನ್ನು ಟ್ರಂಪ್ ಪಡೆದುಕೊಂಡಿದ್ದಾರೆ.
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…