ದೇಶ- ವಿದೇಶ

ಅಮೆರಿಕ ಜತೆ ಮಾತುಕತೆಗೆ ಹಿಂದೇಟು ಹಾಕಿದ ಇರಾನ್‌ ; ಹೊರ್ಮುಜ್ ನಿರ್ಬಂಧ ಮುಂದುವರಿಕೆ

ಟೆಹ್ರಾನ್‌ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಪರಿಣಾಮ ಹೊರ್ಮುಜ್ ಜಲಸಂಧಿಯ ನಿಯಂತ್ರಣವನ್ನು ಮುಂದುವರಿಸುವುದಾಗಿ ಇರಾನ್ ಘೋಷಿಸಿದೆ.

ಇತ್ತೀಚೆಗೆ ಇರಾನ್‌ನ ಒಂದು ಹಡಗನ್ನು ಅಮೆರಿಕದ ಪಡೆಗಳು ವಶಪಡಿಸಿಕೊಂಡಿರುವುದು ಈ ಬೆಳವಣಿಗೆಗೆ ಕಾರಣವಾಗಿದೆ ಎನ್ನಲಾಗಿದೆ. ಇದರಿಂದಾಗಿ ಜಲಸಂಧಿಯಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುವ ಸನ್ನಿವೇಶ ಸೃಷ್ಟಿವಾಗಿದೆ.

ಇರಾನ್ ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ಮಾತನಾಡಿ, “ಅಮೆರಿಕದೊಂದಿಗೆ ಯಾವುದೇ ಮಾತುಕತೆಗೆ ಪ್ರಸ್ತುತ ಸಮಯ ಸಕಾಲವಲ್ಲ. ಅಮೆರಿಕದ ಕ್ರಮಕ್ಕೆ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಹೊರ್ಮುಜ್ ಜಲಸಂಧಿ ಮೇಲಿನ ತನ್ನ ಹಿಡಿತ ಬಿಗಿಗೊಳಿಸಿರುವುದಾಗಿ ಇರಾನ್‌ ಸ್ಪಷ್ಟವಾಗಿ ಹೇಳಿದೆ.

ಡೊನಾಲ್ಡ್‌ ಟ್ರಂಪ್‌ ಅವರು ಮಂಗಳವಾರ ಇರಾನ್‌ ಜತೆಗೆ ಎರಡನೇ ಸುತ್ತಿನ ಮಾತುಕತೆ ನಡೆಯುವುದನ್ನು ಭಾನುವಾರ ಖಚಿತಪಡಿಸಿದ್ದರು. ಉಪಾಧ್ಯಾಕ್ಷ ಜೆ.ಡಿ.ವ್ಯಾನ್ಸ್‌ ನೇತೃತ್ವದ ನಿಯೋಗ ಪಾಕಿಸ್ತಾನಕ್ಕೆ ತೆರಳಲಿದೆ ಎಂದಿದ್ದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago