ಟೆಹ್ರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಪರಿಣಾಮ ಹೊರ್ಮುಜ್ ಜಲಸಂಧಿಯ ನಿಯಂತ್ರಣವನ್ನು ಮುಂದುವರಿಸುವುದಾಗಿ ಇರಾನ್ ಘೋಷಿಸಿದೆ.
ಇತ್ತೀಚೆಗೆ ಇರಾನ್ನ ಒಂದು ಹಡಗನ್ನು ಅಮೆರಿಕದ ಪಡೆಗಳು ವಶಪಡಿಸಿಕೊಂಡಿರುವುದು ಈ ಬೆಳವಣಿಗೆಗೆ ಕಾರಣವಾಗಿದೆ ಎನ್ನಲಾಗಿದೆ. ಇದರಿಂದಾಗಿ ಜಲಸಂಧಿಯಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುವ ಸನ್ನಿವೇಶ ಸೃಷ್ಟಿವಾಗಿದೆ.
ಇರಾನ್ ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ಮಾತನಾಡಿ, “ಅಮೆರಿಕದೊಂದಿಗೆ ಯಾವುದೇ ಮಾತುಕತೆಗೆ ಪ್ರಸ್ತುತ ಸಮಯ ಸಕಾಲವಲ್ಲ. ಅಮೆರಿಕದ ಕ್ರಮಕ್ಕೆ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಹೊರ್ಮುಜ್ ಜಲಸಂಧಿ ಮೇಲಿನ ತನ್ನ ಹಿಡಿತ ಬಿಗಿಗೊಳಿಸಿರುವುದಾಗಿ ಇರಾನ್ ಸ್ಪಷ್ಟವಾಗಿ ಹೇಳಿದೆ.
ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ ಇರಾನ್ ಜತೆಗೆ ಎರಡನೇ ಸುತ್ತಿನ ಮಾತುಕತೆ ನಡೆಯುವುದನ್ನು ಭಾನುವಾರ ಖಚಿತಪಡಿಸಿದ್ದರು. ಉಪಾಧ್ಯಾಕ್ಷ ಜೆ.ಡಿ.ವ್ಯಾನ್ಸ್ ನೇತೃತ್ವದ ನಿಯೋಗ ಪಾಕಿಸ್ತಾನಕ್ಕೆ ತೆರಳಲಿದೆ ಎಂದಿದ್ದರು.
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…