ಟೆಹ್ರಾನ್: ಅಮೇರಿಕಾ ದಾಳಿಗೂ ಕೊಂಚವೂ ಜಗ್ಗದ ಇರಾನ್ ದೇಶ ಇಸ್ರೇಲ್ ಮೇಲೆ ದಾಳಿ ಮುಂದುವರಿಸಿದೆ. ಇರಾನ್ನ 3ಕ್ಕೂ ಹೆಚ್ಚು ಸ್ಥಳಗಳ ಮೇಲೆ ಅಮೇರಿಕಾ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ ದಾಳಿ ನಡೆಸಿದೆ.
ಅಮೇರಿಕಾ ದಾಳಿ ಬಳಿಕ ಇರಾನ್ನ ಮೊದಲ ಪ್ರತೀಕಾರ ಇದಾಗಿದ್ದು, ಇಸ್ರೇಲ್ ಮೇಲೆ ಇರಾನ್ನ ಮಿಸೈಲ್ಗಳು ಅಪ್ಪಳಿಸಿವೆ. ಇರಾನ್ ಮಿಸೈಲ್ಗಳು ಅಪ್ಪಳಿಸುತ್ತಿದ್ದಂತೆ ಇಸ್ರೇಲ್ನ ಕೆಲವು ಭಾಗಗಳಲ್ಲಿ ಸೈರನ್ ಮೊಳಗಿದೆ. ನಾಗರಿಕರನ್ನು ಸುರಕ್ಷಿತ ಸ್ಥಳಗಳು ಹಾಗೂ ಬಂಕರ್ಗಳಿಗೆ ಸ್ಥಳಾಂತರಿಸಲಾಗಿದೆ. ಮುಂದಿನ ಸೂಚನೆ ಬರುವವರೆಗೂ ಬಂಕರ್ಗಳಿಂದ ಆಚೆ ಬರದಂತೆ ಸೂಚನೆ ನೀಡಲಾಗಿದೆ.
ಇನ್ನು ನಾಗರಿಕರನ್ನು ಗುರಿಯಾಗಿಸಿ ಇರಾನ್ ನಡೆಸಿದ ದಾಳಿಯಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಮೇರಿಕಾ ದಾಳಿಗೂ ಜಗ್ಗದ ಇರಾನ್, ಇಸ್ರೇಲ್ನ ಹೈಫಾ ನಗರ, ರಾಜಧಾನಿ ಟೆಲ್ ಅವೀವ್, ಜೆರುಸೇಲಂ ಸೇರಿದಂತೆ 10ಕ್ಕೂ ಹೆಚ್ಚು ನಗರಗಳ ಮೇಲೆ ಮಿಸೈಲ್ ದಾಳಿ ಮಾಡಿದೆ. ಮಿಸೈಲ್ ದಾಳಿಯಿಂದ ಇಸ್ರೇಲ್ನ ಗಗನಚುಂಬಿ ಕಟ್ಟಡಗಳೇ ಧ್ವಂಸವಾಗಿದ್ದು, ಇರಾನ್ ಮೇಲೆ ಇಸ್ರೇಲ್ ಮತ್ತೆ ದಾಳಿ ನಡೆಸಲು ಸಜ್ಜಾಗಿದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…