ಟೆಹ್ರಾನ್ : ಪಶ್ಚಿಮ ಏಷ್ಯಾದಲ್ಲಿನ ಯುದ್ಧಕ್ಕೆ ಶೀಘ್ರವೇ ಅಂತ್ಯ ಹಾಡುವುದಾಗಿ ಶನಿವಾರವಷ್ಟೆ ಹೇಳಿದ್ದ ಟ್ರಂಪ್, ಈಗ ಇರಾನ್ ಮೇಲಿನ ದಾಳಿಗಳನ್ನು ಹೆಚ್ಚಿಸುವುದಾಗಿ ಹೇಳಿದ್ದು, ಇರಾನಿನ ಇಂಧನ ಸೌಲಭ್ಯಗಳ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ, ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಇರಾನ್ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಹೊರ್ಮುಜ್ ಜಲಸಂಧಿಯನ್ನು 48 ಗಂಟೆಗಳ ಒಳಗಾಗಿ ಸಂಚಾರಕ್ಕೆ ಮುಕ್ತಗೊಳಿಸಬೇಕು. ಇಲ್ಲದಿದ್ದರೆ, ಇರಾನ್ನ ವಿದ್ಯುತ್ ಸ್ಥಾವರ ಸೇರಿದಂತೆ ಎಲ್ಲ ಸ್ಥಾವರಗಳ ಜತೆಗೆ ಇಂಧನ ಸೌಲಭ್ಯಗಳನ್ನು ನಾಶ ಮಾಡಲಾಗುವುದು ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದರು.
ಈ ಬೆದರಿಕೆಗೆ ಬಗ್ಗದ ಇರಾನ್, ಜಲಮಾರ್ಗಗಳನ್ನು ಸಂಪೂರ್ಣ ಬಂದ್ ಮಾಡುವುದಾಗಿ ತಿರುಗೇಟು ನೀಡಿದೆ. ಪರಿಣಾಮ ಉದ್ವಿಗ್ನತೆ ಮತ್ತಷ್ಟು ಹೆಚ್ಚುವ ಆತಂಕ ಸೃಷ್ಟಿಯಾಗಿದೆ.
ಇರಾನ್ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿದರೆ, ಅಮೆರಿಕದ ಷೇರು ಕಂಪನಿಗಳನ್ನು ಸಂಪೂರ್ಣ ನಾಶಮಾಡಲಾಗುವುದು. ಅಮೆರಿಕವು ನೆಲೆಗಳನ್ನು ಹೊಂದಿರುವ ದೇಶಗಳ ಇಂಧನ ಸೌಕರ್ಯಗಳು ಕಾನೂನುಬದ್ಧವಾಗಿಯೂ ನಮ್ಮ ಗುರಿಯಾಗಲಿದೆ ಎಂಬುದಾಗಿ ಇರಾನ್ ರೆವಲ್ಯೂಷನರಿ ಗಾರ್ಡ್ಸ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…