ದೇಶ- ವಿದೇಶ

ಅಮೆರಿಕ ತೈಲ ಟ್ಯಾಂಕರ್ ಮೇಲೆ ಇರಾನ್ ಡ್ರೋನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ ನಡುವೆಯೇ ಪರ್ಶಿಯನ್ ಕೊಲ್ಲಿಯಲ್ಲಿ ಮತ್ತೊಂದು ಭಾರೀ ದಾಳಿ ನಡೆದಿದ್ದು, ಅಮೆರಿಕ ಮಾಲೀಕತ್ವದ ಕಚ್ಚಾ ತೈಲ ಟ್ಯಾಂಕರ್ ಮೇಲೆ ಇರಾನ್ ಅಂಡರ್‌ವಾಟರ್ ಡ್ರೋನ್ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಭಾರತೀಯ ನಾವಿಕನೊಬ್ಬ ಸಾವನ್ನಪ್ಪಿದ್ದಾರೆ.

ಇರಾಕ್‌ನ ಬಸ್ರಾ ಸಮೀಪ ಮಂಗಳವಾರ ಅಮೆರಿಕ ಮೂಲದ ಕಂಪನಿಯ ಒಡೆತನದಲ್ಲಿರುವ “ಸಫೆಸಿಯಾ ವಿಷ್ಣು” (Safe Sea Vishnu) ಎಂಬ ಕಚ್ಚಾ ತೈಲ ಟ್ಯಾಂಕರ್ ಮೇಲೆ ದಾಳಿ ನಡೆದಿದೆ. ಈ ಹಡಗು ಮಾರ್ಷಲ್ ದ್ವೀಪಗಳ ಧ್ವಜದ ಅಡಿಯಲ್ಲಿ ಪ್ರಯಾಣಿಸುತ್ತಿದ್ದು, ಪೆಟ್ರೋಲಿಯಂ ಕಚ್ಚಾ ತೈಲವನ್ನು ಸಾಗಿಸುತ್ತಿತ್ತು. ದಾಳಿಯ ಪರಿಣಾಮವಾಗಿ ಹಡಗಿನಲ್ಲಿ ಭಾರೀ ಸ್ಫೋಟ ಸಂಭವಿಸಿ ಒಬ್ಬ ಭಾರತೀಯ ಸಿಬ್ಬಂದಿ ದುರದೃಷ್ಟವಶಾತ್ ಪ್ರಾಣ ಕಳೆದುಕೊಂಡಿದ್ದಾರೆ.

ಹಡಗಿನಲ್ಲಿ ಕೆಲಸ ಮಾಡುತ್ತಿದ್ದ ಉಳಿದ 15 ಭಾರತೀಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಬಾಗ್ದಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಗಾಯಗೊಂಡ ಅಥವಾ ಅಪಾಯದಲ್ಲಿದ್ದ ಸಿಬ್ಬಂದಿಯನ್ನು ಸಮೀಪದ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗಿದ್ದು, ಅವರ ಆರೋಗ್ಯದ ಸ್ಥಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಇರಾನ್ ರಾಜ್ಯ ಪ್ರಸಾರ ಸಂಸ್ಥೆ ಐಆರ್‌ಐಬಿ ವರದಿ ಪ್ರಕಾರ, ಪರ್ಶಿಯನ್ ಕೊಲ್ಲಿಯಲ್ಲಿ ನಡೆದ ದಾಳಿಯಲ್ಲಿ ಎರಡು ತೈಲ ಟ್ಯಾಂಕರ್‌ಗಳು ಸ್ಫೋಟಗೊಂಡಿವೆ ಎಂದು ತಿಳಿಸಲಾಗಿದೆ. ನೀರಿನಾಳದಲ್ಲಿ ಕಾರ್ಯನಿರ್ವಹಿಸುವ ಡ್ರೋನ್ ಅಥವಾ ಸ್ಫೋಟಕ ಸಾಧನಗಳ ಮೂಲಕ ಈ ದಾಳಿ ನಡೆದಿರಬಹುದು ಎಂದು ವರದಿಗಳು ಸೂಚಿಸಿವೆ.

ದಾಳಿಗೆ ಗುರಿಯಾದ ಮತ್ತೊಂದು ಹಡಗು ಜೆಫಿರೋಸ್ ಎಂಬ ಹೆಸರಿನ ಟ್ಯಾಂಕರ್ ಆಗಿದ್ದು, ಅದು ಮಾಲ್ಟೀಸ್ ಧ್ವಜ ಹೊತ್ತ ಹಡಗು. ಇದರ ಮಾಲೀಕರು ಗ್ರೀಸ್‌ನಲ್ಲಿ ನೆಲೆಸಿದ್ದಾರೆ. ಸ್ಫೋಟದ ಪರಿಣಾಮವಾಗಿ ಈ ಹಡಗಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಇದಕ್ಕೂ ಮೊದಲು, ಸ್ಫೋಟಕಗಳಿಂದ ಸಜ್ಜುಗೊಂಡ ‘ಆತ್ಮಹತ್ಯಾ’ ದೋಣಿ ಎರಡು ಹಡಗುಗಳಿಗೆ ಡಿಕ್ಕಿ ಹೊಡೆದಿರಬಹುದು ಎಂಬ ಶಂಕೆಯನ್ನೂ ಕೆಲ ಅಂತರರಾಷ್ಟ್ರೀಯ ಮಾಧ್ಯಮಗಳು ವ್ಯಕ್ತಪಡಿಸಿದ್ದವು. ಘಟನೆಯ ಕುರಿತು ತನಿಖೆ ಮುಂದುವರಿದಿದೆ.

ಭಾರತೀಯರ ಸುರಕ್ಷತೆಗೆ ಸರ್ಕಾರದ ಕ್ರಮ
ಈ ಘಟನೆ ಬಗ್ಗೆ ಬಾಗ್ದಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಭಾರತ ವಿದೇಶಾಂಗ ಸಚಿವಾಲಯ ನಿರಂತರವಾಗಿ ಮಾಹಿತಿ ಪಡೆಯುತ್ತಿದೆ. ರಕ್ಷಿಸಲಾದ ಭಾರತೀಯ ನಾವಿಕರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಾರತೀಯ ನಾಗರಿಕರ ಸುರಕ್ಷತೆ ಸರ್ಕಾರದ ಪ್ರಥಮ ಆದ್ಯತೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ
ಪರ್ಶಿಯನ್ ಕೊಲ್ಲಿಯಲ್ಲಿರುವ ಹಾರ್ಮುಜ್ ಜಲಸಂಧಿ ವಿಶ್ವದ ಅತ್ಯಂತ ಪ್ರಮುಖ ತೈಲ ಸಾಗಣೆ ಮಾರ್ಗಗಳಲ್ಲಿ ಒಂದಾಗಿದೆ. ಇರಾನ್ ಮತ್ತು ಓಮನ್ ನಡುವಿನ ಸುಮಾರು 55 ಕಿಲೋಮೀಟರ್ ಅಗಲದ ಈ ಜಲಮಾರ್ಗ ಪರ್ಷಿಯನ್ ಕೊಲ್ಲಿಯನ್ನು ಅರೇಬಿಯನ್ ಸಮುದ್ರಕ್ಕೆ ಸಂಪರ್ಕಿಸುತ್ತದೆ. ಸಾಮಾನ್ಯವಾಗಿ ದಿನಕ್ಕೆ ಸುಮಾರು 13 ಮಿಲಿಯನ್ ಬ್ಯಾರೆಲ್ ತೈಲ ಈ ಮಾರ್ಗದ ಮೂಲಕ ಸಾಗುತ್ತದೆ. ಇದು ಜಾಗತಿಕ ತೈಲ ಸಾಗಣೆಯ ಸುಮಾರು 30 ಶೇಕಡಾ ಪಾಲನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago