ದೇಶ- ವಿದೇಶ

ಮೈಸೂರು ಸೇರಿದಂತೆ ಇನ್ಮೂಂದೆ ಈ ರೈಲ್ವೆ ನಿಲ್ದಾಣಗಳಲ್ಲಿ ಕಡಿಮೆ ದರದ ಉತ್ತಮ ಊಟ ಮತ್ತು ನೀರು ಸಿಗುತ್ತೆ!

ಬೆಂಗಳೂರು: ಭಾರತೀಯ ರೈಲ್ವೆ ಮಂಡಳಿ ಹಾಗೂ ಇಂಡಿಯನ್‌ ರೈಲ್ವೇಸ್‌ ಕೇಟರಿಂಗ್‌ ಆಂಡ್‌ ಟೂರಿಸಂ ಕಾರ್ಪೊರೇಶನ್(ಐಆರ್‌ಸಿಟಿಸಿ) ಜಂಟಿಯಾಗಿ ದೇಶದ 100 ರೈಲ್ವೆ ನಿಲ್ದಾಣಗಳಲ್ಲಿ ಕಡಿಮೆ ದರದಲ್ಲಿ ಉತ್ತಮ ಊಟ ಮತ್ತು ನೀರು ನೀಡುವ ಕೌಂಟರ್‌ ಆರಂಭಿಸಿದೆ.

ಸಾರ್ವಜನಿಕರು ಬೇಸಿಗೆಯ ಬಿಸಿಲಿಗೆ ಬಸವಳಿದಿರುವ ಕಾಲದಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿಗಳನ್ನು ನೀಡುವ ಉದ್ದೇಶದಿಂದ ಭಾರತೀಯ ರೈಲ್ವೆ ಈ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ, ಪ್ರಮುಖ ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ದರ್ಜೆಯ ಕೋಚ್‌ಗಳ ಬಳಿ ಈ ಕಡಿಮೆ ದರದ ಉತ್ತಮ ಆಹಾರ ನೀಡುವ ಕೌಂಟರ್‌ಗಳನ್ನು ತೆರೆದಿದೆ.

ಸಾಮಾನ್ಯವಾಗಿ ರೈಲ್ವೆ ನಿಲ್ದಾಣಗಳಲ್ಲಿ ದುಪ್ಪಟ ದರದಲ್ಲಿಯೇ ಆಹಾರ ಪದರ್ಥಾಗಳು ಇರುತ್ತದೆ. ಇದರಿಂದ ಸಾಮಾನ್ಯ ವರ್ಗದ ಜನರಿಗೆ ತೊಂದರೆಯಾಗುತ್ತಿತ್ತು. ಇದೀಗ ಸಾಮಾನ್ಯ ದರ್ಜೆಗಳಲ್ಲಿ ತೆರಳುವ ಬಡ ಹಾಗೂ ಮಧ್ಯಮ ವರ್ಗದ ಪ್ರಯಾಣಿಕರಿಗೆ ಅನುಕೂಲವಾಗುವ ರೀತಿ ಕಡಿಮೆ ದರದಲ್ಲಿ ರೈಲ್ವೆ ಮಂಡಳಿ ಗುಣಮಟ್ಟದ ಆಹಾರ ಪದರ್ಥಗಳನ್ನು ನೀಡುತ್ತಿದೆ.

ಉಪಾಹಾರ ರೂ 20, ಊಟ ರೂ 50, ನೀರು ರೂ 3(200 ಎಂ.ಎಲ್)‌ ದರ ನಿಗದಿಪಡಿಸಿ ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ನೀಡಲು ರೈಲ್ವೆ ಮಂಡಳಿ ಮುಂದಾಗಿದೆ.

ದಕ್ಷಿಣ ರೈಲ್ವೆ ವ್ಯಾಪ್ತಿಯ ಮಂಗಳೂರು ಸೆಂಟ್ರಲ್‌ ಮತ್ತು ಮಂಗಳೂರು ಜಂಕ್ಷನ್‌ ನಿಲ್ದಾಣಗಳು. ನೈರುತ್ಯ ರೈಲ್ವೆ ವ್ಯಾಪ್ತಿಯ ಕೆಎಸ್‌ಆರ್‌ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಹಾಗೂ ಬಳ್ಳಾರಿ ರೈಲ್ವೆ ನಿಲ್ದಾಣ ಸೇರಿದಂತೆ ದೇಶಾದ್ಯಾಂತ 100 ರೈಲ್ವೆ ನಿಲ್ದಾಣಗಳ 150 ಪ್ಲಾಟ್‌ಫಾರಂಗಳಲ್ಲಿ ಈ ವ್ಯವಸ್ಥೆ ಮಾಡಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

12 mins ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

9 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

9 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

10 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

12 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

12 hours ago