ದೇಶ- ವಿದೇಶ

ಮೈಸೂರು ಸೇರಿದಂತೆ ಇನ್ಮೂಂದೆ ಈ ರೈಲ್ವೆ ನಿಲ್ದಾಣಗಳಲ್ಲಿ ಕಡಿಮೆ ದರದ ಉತ್ತಮ ಊಟ ಮತ್ತು ನೀರು ಸಿಗುತ್ತೆ!

ಬೆಂಗಳೂರು: ಭಾರತೀಯ ರೈಲ್ವೆ ಮಂಡಳಿ ಹಾಗೂ ಇಂಡಿಯನ್‌ ರೈಲ್ವೇಸ್‌ ಕೇಟರಿಂಗ್‌ ಆಂಡ್‌ ಟೂರಿಸಂ ಕಾರ್ಪೊರೇಶನ್(ಐಆರ್‌ಸಿಟಿಸಿ) ಜಂಟಿಯಾಗಿ ದೇಶದ 100 ರೈಲ್ವೆ ನಿಲ್ದಾಣಗಳಲ್ಲಿ ಕಡಿಮೆ ದರದಲ್ಲಿ ಉತ್ತಮ ಊಟ ಮತ್ತು ನೀರು ನೀಡುವ ಕೌಂಟರ್‌ ಆರಂಭಿಸಿದೆ.

ಸಾರ್ವಜನಿಕರು ಬೇಸಿಗೆಯ ಬಿಸಿಲಿಗೆ ಬಸವಳಿದಿರುವ ಕಾಲದಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿಗಳನ್ನು ನೀಡುವ ಉದ್ದೇಶದಿಂದ ಭಾರತೀಯ ರೈಲ್ವೆ ಈ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ, ಪ್ರಮುಖ ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ದರ್ಜೆಯ ಕೋಚ್‌ಗಳ ಬಳಿ ಈ ಕಡಿಮೆ ದರದ ಉತ್ತಮ ಆಹಾರ ನೀಡುವ ಕೌಂಟರ್‌ಗಳನ್ನು ತೆರೆದಿದೆ.

ಸಾಮಾನ್ಯವಾಗಿ ರೈಲ್ವೆ ನಿಲ್ದಾಣಗಳಲ್ಲಿ ದುಪ್ಪಟ ದರದಲ್ಲಿಯೇ ಆಹಾರ ಪದರ್ಥಾಗಳು ಇರುತ್ತದೆ. ಇದರಿಂದ ಸಾಮಾನ್ಯ ವರ್ಗದ ಜನರಿಗೆ ತೊಂದರೆಯಾಗುತ್ತಿತ್ತು. ಇದೀಗ ಸಾಮಾನ್ಯ ದರ್ಜೆಗಳಲ್ಲಿ ತೆರಳುವ ಬಡ ಹಾಗೂ ಮಧ್ಯಮ ವರ್ಗದ ಪ್ರಯಾಣಿಕರಿಗೆ ಅನುಕೂಲವಾಗುವ ರೀತಿ ಕಡಿಮೆ ದರದಲ್ಲಿ ರೈಲ್ವೆ ಮಂಡಳಿ ಗುಣಮಟ್ಟದ ಆಹಾರ ಪದರ್ಥಗಳನ್ನು ನೀಡುತ್ತಿದೆ.

ಉಪಾಹಾರ ರೂ 20, ಊಟ ರೂ 50, ನೀರು ರೂ 3(200 ಎಂ.ಎಲ್)‌ ದರ ನಿಗದಿಪಡಿಸಿ ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ನೀಡಲು ರೈಲ್ವೆ ಮಂಡಳಿ ಮುಂದಾಗಿದೆ.

ದಕ್ಷಿಣ ರೈಲ್ವೆ ವ್ಯಾಪ್ತಿಯ ಮಂಗಳೂರು ಸೆಂಟ್ರಲ್‌ ಮತ್ತು ಮಂಗಳೂರು ಜಂಕ್ಷನ್‌ ನಿಲ್ದಾಣಗಳು. ನೈರುತ್ಯ ರೈಲ್ವೆ ವ್ಯಾಪ್ತಿಯ ಕೆಎಸ್‌ಆರ್‌ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಹಾಗೂ ಬಳ್ಳಾರಿ ರೈಲ್ವೆ ನಿಲ್ದಾಣ ಸೇರಿದಂತೆ ದೇಶಾದ್ಯಾಂತ 100 ರೈಲ್ವೆ ನಿಲ್ದಾಣಗಳ 150 ಪ್ಲಾಟ್‌ಫಾರಂಗಳಲ್ಲಿ ಈ ವ್ಯವಸ್ಥೆ ಮಾಡಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago