ದೇಶ- ವಿದೇಶ

ಮೈಸೂರು ಸೇರಿದಂತೆ ಇನ್ಮೂಂದೆ ಈ ರೈಲ್ವೆ ನಿಲ್ದಾಣಗಳಲ್ಲಿ ಕಡಿಮೆ ದರದ ಉತ್ತಮ ಊಟ ಮತ್ತು ನೀರು ಸಿಗುತ್ತೆ!

ಬೆಂಗಳೂರು: ಭಾರತೀಯ ರೈಲ್ವೆ ಮಂಡಳಿ ಹಾಗೂ ಇಂಡಿಯನ್‌ ರೈಲ್ವೇಸ್‌ ಕೇಟರಿಂಗ್‌ ಆಂಡ್‌ ಟೂರಿಸಂ ಕಾರ್ಪೊರೇಶನ್(ಐಆರ್‌ಸಿಟಿಸಿ) ಜಂಟಿಯಾಗಿ ದೇಶದ 100 ರೈಲ್ವೆ ನಿಲ್ದಾಣಗಳಲ್ಲಿ ಕಡಿಮೆ ದರದಲ್ಲಿ ಉತ್ತಮ ಊಟ ಮತ್ತು ನೀರು ನೀಡುವ ಕೌಂಟರ್‌ ಆರಂಭಿಸಿದೆ.

ಸಾರ್ವಜನಿಕರು ಬೇಸಿಗೆಯ ಬಿಸಿಲಿಗೆ ಬಸವಳಿದಿರುವ ಕಾಲದಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿಗಳನ್ನು ನೀಡುವ ಉದ್ದೇಶದಿಂದ ಭಾರತೀಯ ರೈಲ್ವೆ ಈ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ, ಪ್ರಮುಖ ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ದರ್ಜೆಯ ಕೋಚ್‌ಗಳ ಬಳಿ ಈ ಕಡಿಮೆ ದರದ ಉತ್ತಮ ಆಹಾರ ನೀಡುವ ಕೌಂಟರ್‌ಗಳನ್ನು ತೆರೆದಿದೆ.

ಸಾಮಾನ್ಯವಾಗಿ ರೈಲ್ವೆ ನಿಲ್ದಾಣಗಳಲ್ಲಿ ದುಪ್ಪಟ ದರದಲ್ಲಿಯೇ ಆಹಾರ ಪದರ್ಥಾಗಳು ಇರುತ್ತದೆ. ಇದರಿಂದ ಸಾಮಾನ್ಯ ವರ್ಗದ ಜನರಿಗೆ ತೊಂದರೆಯಾಗುತ್ತಿತ್ತು. ಇದೀಗ ಸಾಮಾನ್ಯ ದರ್ಜೆಗಳಲ್ಲಿ ತೆರಳುವ ಬಡ ಹಾಗೂ ಮಧ್ಯಮ ವರ್ಗದ ಪ್ರಯಾಣಿಕರಿಗೆ ಅನುಕೂಲವಾಗುವ ರೀತಿ ಕಡಿಮೆ ದರದಲ್ಲಿ ರೈಲ್ವೆ ಮಂಡಳಿ ಗುಣಮಟ್ಟದ ಆಹಾರ ಪದರ್ಥಗಳನ್ನು ನೀಡುತ್ತಿದೆ.

ಉಪಾಹಾರ ರೂ 20, ಊಟ ರೂ 50, ನೀರು ರೂ 3(200 ಎಂ.ಎಲ್)‌ ದರ ನಿಗದಿಪಡಿಸಿ ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ನೀಡಲು ರೈಲ್ವೆ ಮಂಡಳಿ ಮುಂದಾಗಿದೆ.

ದಕ್ಷಿಣ ರೈಲ್ವೆ ವ್ಯಾಪ್ತಿಯ ಮಂಗಳೂರು ಸೆಂಟ್ರಲ್‌ ಮತ್ತು ಮಂಗಳೂರು ಜಂಕ್ಷನ್‌ ನಿಲ್ದಾಣಗಳು. ನೈರುತ್ಯ ರೈಲ್ವೆ ವ್ಯಾಪ್ತಿಯ ಕೆಎಸ್‌ಆರ್‌ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಹಾಗೂ ಬಳ್ಳಾರಿ ರೈಲ್ವೆ ನಿಲ್ದಾಣ ಸೇರಿದಂತೆ ದೇಶಾದ್ಯಾಂತ 100 ರೈಲ್ವೆ ನಿಲ್ದಾಣಗಳ 150 ಪ್ಲಾಟ್‌ಫಾರಂಗಳಲ್ಲಿ ಈ ವ್ಯವಸ್ಥೆ ಮಾಡಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

26 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

2 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

3 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

3 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

3 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

3 hours ago