ಮೈಸೂರು: ಮೈಸೂರಿನ ಐರನ್ ಮ್ಯಾನ್ ಖ್ಯಾತಿಯ ಡಾ.ಉಷಾ ಹೆಗ್ಡೆ ವಿಶ್ವದ ಅತಿ ಎತ್ತರದ ಹಿಮ ಪರ್ವತ ಏರುವ ಮೂಲಕ ಈ ಸಾಧನೆ ಮಾಡಿದ ಕರ್ನಾಟಕದ ಮೊದಲ ನಾಗರೀಕ ಮಹಿಳೆ ಎನಿಸಿದ್ದಾರೆ.
52 ವರ್ಷದ ಉಷಾ ಹೆಗ್ಡೆ ಅವರು ಜೆಎಸ್ಎಸ್ ಡೆಂಟಲ್ ಕಾಲೇಜಿನ ಪ್ರೊಫೆಸರ್ ಆಗಿದ್ದಾರೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಓದಿದ್ದು, ಮೈಸೂರಿನ ಜೆಎಸ್ಎಸ್ ಡೆಂಟಲ್ ಕಾಲೇಜಿನಲ್ಲಿ. ಅದೇ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದುಕೊಂಡು ಹಿಮಾಲಯ ಪರ್ವತ ಏರಿ ಮಹೋನ್ನತ ಸಾಧನೆ ಮಾಡಿದ್ದಾರೆ.
52 ದಿನಗಳ ಕಾಲ ಸುದೀರ್ಘ ಪ್ರವಾಸ ಮಾಡಿ ಬಂದ ಧೀರ ವನಿತೆ ಡಾ.ಉಷಾ ಹೆಗ್ಡೆಯವರ ಪರ್ವಾರೋಹಣ ಮೈನವಿರೇಳಿಸಿದೆ.
ಮೊದಲ ದಿನ ಏಪ್ರಿಲ್.2ರಂದು ಮೈಸೂರಿನಿಂದ ಹೊರಟ ಉಷಾ ಅವರು ವಾಪಸ್ ಬಂದಿದ್ದು ಮೇ.25ರಂದು. ಏಪ್ರಿಲ್ 6ರಿಂದ ಹಿಮಾಲಯ ಚಾರಣ ಆರಂಭಿಸಿದ್ದಾರೆ. ನೇಪಾಳದ ಲುಕ್ಲಾ ಜಾಗದಿಂದ ನಡಿಗೆ ಆರಂಭಿಸಿ ಏಪ್ರಿಲ್ 8ರಂದು ಟ್ರಕ್ಕಿಂಗ್ ಬೇಸ್ ಕ್ಯಾಂಪ್ ರೀಚ್ ಆಗಿದ್ದಾರೆ.
ಒಂದು ರಾತ್ರಿ ಕ್ಯಾಂಪ್ನಲ್ಲಿ ಕಳೆದ ಬಳಿಕ ಕ್ಯಾಂಪ್ 2 ತಲುಪಿ ಎರಡು ದಿನ ಕಳೆದಿದ್ದಾರೆ. ನಂತರ 3ನೇ ದಿನ ಎರಡನೇ ಕ್ಯಾಂಪ್ನಿಂದ ಹೊರಟು 3ನೇ ಕ್ಯಾಂಪ್ನಲ್ಲಿ ಒಂದು ದಿನ ಕಳೆದಿದ್ದಾರೆ. ನಂತರ ಕ್ಯಾಂಪ್ 4ಕ್ಕೆ ತಲುಪಿ 3 ಗಂಟೆ ಅಲ್ಲೇ ತಂಗಿದ ಬಳಿದ ರಾತ್ರಿಯಿಡೀ ನಡೆದು ಮೇ.19 ಬೆಳಿಗ್ಗೆ 6.10ಕ್ಕೆ ತುದಿ ತಲುಪಿದ್ದಾರೆ.
ಇದಕ್ಕಾಗಿ ಎಡು ವರ್ಷಗಳಿಂದ ತಯಾರಿ ಮಾಡಿಕೊಂಡಿದ್ದ ಡಾ.ಉಷಾ ಹೆಗ್ಡೆ ಅವರು, ಈ ಮೊದಲು ದೇಶದ ಇತರ ಸ್ಥಳಗಳಲ್ಲಿ ಪರ್ವತ ಹತ್ತಿ ತಯಾರಿ ನಡೆಸಿದ್ದರು.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…