ಮೈಸೂರು: ಮೈಸೂರಿನ ಐರನ್ ಮ್ಯಾನ್ ಖ್ಯಾತಿಯ ಡಾ.ಉಷಾ ಹೆಗ್ಡೆ ವಿಶ್ವದ ಅತಿ ಎತ್ತರದ ಹಿಮ ಪರ್ವತ ಏರುವ ಮೂಲಕ ಈ ಸಾಧನೆ ಮಾಡಿದ ಕರ್ನಾಟಕದ ಮೊದಲ ನಾಗರೀಕ ಮಹಿಳೆ ಎನಿಸಿದ್ದಾರೆ.
52 ವರ್ಷದ ಉಷಾ ಹೆಗ್ಡೆ ಅವರು ಜೆಎಸ್ಎಸ್ ಡೆಂಟಲ್ ಕಾಲೇಜಿನ ಪ್ರೊಫೆಸರ್ ಆಗಿದ್ದಾರೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಓದಿದ್ದು, ಮೈಸೂರಿನ ಜೆಎಸ್ಎಸ್ ಡೆಂಟಲ್ ಕಾಲೇಜಿನಲ್ಲಿ. ಅದೇ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದುಕೊಂಡು ಹಿಮಾಲಯ ಪರ್ವತ ಏರಿ ಮಹೋನ್ನತ ಸಾಧನೆ ಮಾಡಿದ್ದಾರೆ.
52 ದಿನಗಳ ಕಾಲ ಸುದೀರ್ಘ ಪ್ರವಾಸ ಮಾಡಿ ಬಂದ ಧೀರ ವನಿತೆ ಡಾ.ಉಷಾ ಹೆಗ್ಡೆಯವರ ಪರ್ವಾರೋಹಣ ಮೈನವಿರೇಳಿಸಿದೆ.
ಮೊದಲ ದಿನ ಏಪ್ರಿಲ್.2ರಂದು ಮೈಸೂರಿನಿಂದ ಹೊರಟ ಉಷಾ ಅವರು ವಾಪಸ್ ಬಂದಿದ್ದು ಮೇ.25ರಂದು. ಏಪ್ರಿಲ್ 6ರಿಂದ ಹಿಮಾಲಯ ಚಾರಣ ಆರಂಭಿಸಿದ್ದಾರೆ. ನೇಪಾಳದ ಲುಕ್ಲಾ ಜಾಗದಿಂದ ನಡಿಗೆ ಆರಂಭಿಸಿ ಏಪ್ರಿಲ್ 8ರಂದು ಟ್ರಕ್ಕಿಂಗ್ ಬೇಸ್ ಕ್ಯಾಂಪ್ ರೀಚ್ ಆಗಿದ್ದಾರೆ.
ಒಂದು ರಾತ್ರಿ ಕ್ಯಾಂಪ್ನಲ್ಲಿ ಕಳೆದ ಬಳಿಕ ಕ್ಯಾಂಪ್ 2 ತಲುಪಿ ಎರಡು ದಿನ ಕಳೆದಿದ್ದಾರೆ. ನಂತರ 3ನೇ ದಿನ ಎರಡನೇ ಕ್ಯಾಂಪ್ನಿಂದ ಹೊರಟು 3ನೇ ಕ್ಯಾಂಪ್ನಲ್ಲಿ ಒಂದು ದಿನ ಕಳೆದಿದ್ದಾರೆ. ನಂತರ ಕ್ಯಾಂಪ್ 4ಕ್ಕೆ ತಲುಪಿ 3 ಗಂಟೆ ಅಲ್ಲೇ ತಂಗಿದ ಬಳಿದ ರಾತ್ರಿಯಿಡೀ ನಡೆದು ಮೇ.19 ಬೆಳಿಗ್ಗೆ 6.10ಕ್ಕೆ ತುದಿ ತಲುಪಿದ್ದಾರೆ.
ಇದಕ್ಕಾಗಿ ಎಡು ವರ್ಷಗಳಿಂದ ತಯಾರಿ ಮಾಡಿಕೊಂಡಿದ್ದ ಡಾ.ಉಷಾ ಹೆಗ್ಡೆ ಅವರು, ಈ ಮೊದಲು ದೇಶದ ಇತರ ಸ್ಥಳಗಳಲ್ಲಿ ಪರ್ವತ ಹತ್ತಿ ತಯಾರಿ ನಡೆಸಿದ್ದರು.
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…