Governor Gehlot's
ಹೊಸದಿಲ್ಲಿ : ಮಾಜಿ ಉಪರಾಷ್ಟಪತಿ ಜಗದೀಶ್ ಧನ್ಕರ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಕರ್ನಾಟಕ ಹಾಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವಾರ ಹೆಸರುಗಳು ಕೇಳಿ ಬಂದಿವೆ.
ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಸಿಕ್ಕಿಂ ರಾಜ್ಯಪಾಲ ಓಂ ಮಾಥುರ್ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸೇರಿದಂತೆ ಸಂಭಾವ್ಯ ಆಯ್ಕೆಗಳ ಕುರಿತು ಚರ್ಚೆ ಪ್ರಾರಂಭವಾಗಿದೆ.
ಏತನ್ಮಧ್ಯೆ, ಬಿಜೆಪಿ ಪಕ್ಷದ ಮಾತೃ ಸಂಘಟನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಬಲವಾದ ಸೈದ್ಧಾಂತಿಕ ಬೇರುಗಳನ್ನು ಹೊಂದಿರುವ ಬಿಜೆಪಿ ನಾಯಕರೊಬ್ಬರು ನಾಮನಿರ್ದೇಶಿತರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಹಾಗಾಗಿ, ರೇಸ್ನಲ್ಲಿ ಸಚಿವರಾದ ರಾಜನಾಥ್ ಸಿಂಗ್, ಜೆಪಿ ನಡ್ಡಾ ಹಾಗೂ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಹೆಸರುಗಳು ಕೇಳಿಬರುತ್ತಿವೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಸೈದ್ಧಾಂತಿಕ ಚಿಂತಕರಾದ ಶೇಷಾದ್ರಿ ಚಾರಿ ಅವರನ್ನು ಅಭ್ಯರ್ಥಿ ಮಾಡುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿದೆ ಎನ್ನಲಾಗಿದ್ದು, ಬಿಹಾರ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜ್ಯಸಭೆಯ ಹಾಲಿ ಉಪ ಸಭಾಪತಿ ಹರಿವಂಶ್ ಅವರ ಹೆಸರೂ ಪರಿಗಣನೆಯಲ್ಲಿದೆ. ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನ್ಕರ್ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಇದೇ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಕಸರತ್ತು ಆರಂಭಿಸಿದೆ.
ಮುಂದಿನ ಉಪರಾಷ್ಟ್ರಪತಿ ತಮ್ಮ ಪಕ್ಷದವರೇ ಆಗಿರಬೇಕು ಮತ್ತು ಪಕ್ಷದ ಹಾಗೂ ಆರ್ಎಸ್ಎಸ್ ಸಿದ್ಧಾಂತದೊಂದಿಗೆ ಬಲವಾಗಿ ಸಂಬಂಧ ಹೊಂದಿರಬೇಕು ಎಂದು ಬಿಜೆಪಿ ನಾಯಕರು ಈ ಹಿಂದೆ ಸ್ಪಷ್ಟಪಡಿಸಿದ್ದರು.
ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಂಬಂಧ ಬಿಜೆಪಿ ಸಂಸದೀಯ ಮಂಡಳಿ ಭಾನುವಾರ ಸಭೆ ಸೇರುವ ಸಾಧ್ಯತೆ ಇದೆ.
ಬಿಜೆಪಿ ಮತ್ತು ಎನ್ಡಿಎ ಮೈತ್ರಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ಉಪರಾಷ್ಟ್ರಪತಿ ಸ್ಥಾನ ತೆರವಾಗಿದ್ದು, ಸೆಪ್ಟೆಂಬರ್ 9ರಂದು ಚುನಾವಣೆ ನಿಗದಿಯಾಗಿದೆ. ಆಗಸ್ಟ್ 18ರಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಈಗಾಗಲೇ ಮೈತ್ರಿಕೂಟದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅಧಿಕಾರ ನೀಡಲಾಗಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…