ದೇಶ- ವಿದೇಶ

ಉಪ ರಾಷ್ಟ್ರಪತಿ ಚುನಾವಣೆ : ಬಿಜೆಪಿ ಸಂಭಾವ್ಯ ಹೆಸರಲ್ಲಿ ರಾಜ್ಯಪಾಲ ಗೆಹ್ಲೋಟ್‌ ಹೆಸರು?

ಹೊಸದಿಲ್ಲಿ : ಮಾಜಿ ಉಪರಾಷ್ಟಪತಿ ಜಗದೀಶ್ ಧನ್ಕರ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಕರ್ನಾಟಕ ಹಾಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವಾರ ಹೆಸರುಗಳು ಕೇಳಿ ಬಂದಿವೆ.

ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಸಿಕ್ಕಿಂ ರಾಜ್ಯಪಾಲ ಓಂ ಮಾಥುರ್ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸೇರಿದಂತೆ ಸಂಭಾವ್ಯ ಆಯ್ಕೆಗಳ ಕುರಿತು ಚರ್ಚೆ ಪ್ರಾರಂಭವಾಗಿದೆ.

ಏತನ್ಮಧ್ಯೆ, ಬಿಜೆಪಿ ಪಕ್ಷದ ಮಾತೃ ಸಂಘಟನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಬಲವಾದ ಸೈದ್ಧಾಂತಿಕ ಬೇರುಗಳನ್ನು ಹೊಂದಿರುವ ಬಿಜೆಪಿ ನಾಯಕರೊಬ್ಬರು ನಾಮನಿರ್ದೇಶಿತರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಹಾಗಾಗಿ, ರೇಸ್​ನಲ್ಲಿ ಸಚಿವರಾದ ರಾಜನಾಥ್ ಸಿಂಗ್, ಜೆಪಿ ನಡ್ಡಾ ಹಾಗೂ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಹೆಸರುಗಳು ಕೇಳಿಬರುತ್ತಿವೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸೈದ್ಧಾಂತಿಕ ಚಿಂತಕರಾದ ಶೇಷಾದ್ರಿ ಚಾರಿ ಅವರನ್ನು ಅಭ್ಯರ್ಥಿ ಮಾಡುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿದೆ ಎನ್ನಲಾಗಿದ್ದು, ಬಿಹಾರ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜ್ಯಸಭೆಯ ಹಾಲಿ ಉಪ ಸಭಾಪತಿ ಹರಿವಂಶ್ ಅವರ ಹೆಸರೂ ಪರಿಗಣನೆಯಲ್ಲಿದೆ. ಉಪರಾಷ್ಟ್ರಪತಿಯಾಗಿದ್ದ ಜಗದೀಪ್‌ ಧನ್‌ಕರ್‌ ದಿಢೀರ್‌ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಇದೇ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಕಸರತ್ತು ಆರಂಭಿಸಿದೆ.

ಮುಂದಿನ ಉಪರಾಷ್ಟ್ರಪತಿ ತಮ್ಮ ಪಕ್ಷದವರೇ ಆಗಿರಬೇಕು ಮತ್ತು ಪಕ್ಷದ ಹಾಗೂ ಆರ್‌ಎಸ್‌ಎಸ್‌ ಸಿದ್ಧಾಂತದೊಂದಿಗೆ ಬಲವಾಗಿ ಸಂಬಂಧ ಹೊಂದಿರಬೇಕು ಎಂದು ಬಿಜೆಪಿ ನಾಯಕರು ಈ ಹಿಂದೆ ಸ್ಪಷ್ಟಪಡಿಸಿದ್ದರು.

ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಂಬಂಧ ಬಿಜೆಪಿ ಸಂಸದೀಯ ಮಂಡಳಿ ಭಾನುವಾರ ಸಭೆ ಸೇರುವ ಸಾಧ್ಯತೆ ಇದೆ.

ಬಿಜೆಪಿ ಮತ್ತು ಎನ್‌ಡಿಎ ಮೈತ್ರಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಜಗದೀಪ್ ಧನಕರ್‌ ಅವರ ರಾಜೀನಾಮೆಯಿಂದ ಉಪರಾಷ್ಟ್ರಪತಿ ಸ್ಥಾನ ತೆರವಾಗಿದ್ದು, ಸೆಪ್ಟೆಂಬರ್‌ 9ರಂದು ಚುನಾವಣೆ ನಿಗದಿಯಾಗಿದೆ. ಆಗಸ್ಟ್‌ 18ರಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಈಗಾಗಲೇ ಮೈತ್ರಿಕೂಟದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅಧಿಕಾರ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

3 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

4 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

5 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

6 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

7 hours ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

10 hours ago