ದೇಶ- ವಿದೇಶ

ದೆಹಲಿ ಕಾರು ಸ್ಫೋಟ ಪ್ರಕರಣಕ್ಕೆ ಪುಲ್ವಾಮಾ ನಂಟು?

ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿರುವ ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಕಾರು ಸ್ಪೋಟಗೊಂಡ ಪ್ರಕರಣದಲ್ಲಿ ಪುಲ್ವಾಮಾ ನಂಟಿರುವ ಬಗ್ಗೆ ತಿಳಿದುಬಂದಿದೆ. ಅಲ್ಲದೇ ಇದೊಂದು ಭಯೋತ್ಪಾದಕ ಕೃತ್ಯ ಎಂದು ಶಂಕೆ ವ್ಯಕ್ತವಾಗಿದೆ.

ಇದನ್ನು ಓದಿ: ದಿಲ್ಲಿಯಲ್ಲಿ ಬಾಂಬ್‌ ಬ್ಲಾಸ್ಟ್‌ | ರಾಜ್ಯದಲ್ಲೂ ಅಲರ್ಟ್‌ ಘೋಷಣೆ ; ಸಿಎಂ

ಸ್ಫೋಟಗೊಂಡ ಕಾರು ಮೊಹಮ್ಮದ್‌ ಸಲ್ಮಾನ್‌ ಎಂಬುವವರ ಹೆಸರಿನಲ್ಲಿ ಹರಿಯಾಣದಲ್ಲಿ ನೋಂದಣಿಯಾಗಿತ್ತು. ಗುರುಗ್ರಾಮದ ಶಾಂತಿನಗರ ನಿವಾಸಿ ಸಲ್ಮಾನ್‌ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರು ಕಾರನ್ನು ಒಂದೂವರೆ ವರ್ಷದ ಹಿಂದೆ ದೆಹಲಿಯ ಓಕ್ಲಾ ನಿವಾಸಿ ದೇವೇಂದರ್‌ ಅವರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ.

ತನಿಖೆ ನಡೆಸಿದ ಪೊಲೀಸರಿಗೆ ದೇವೇಂದರ್‌ ಕೂಡ ಕಾರನ್ನು ಜಮ್ಮ-ಕಾಶ್ಮೀರದ ಪುಲ್ವಾಮಾ ಮೂಲದ ತಾರೀಕ್‌ ಎಂಬ ವ್ಯಕ್ತಿಗೆ ಮಾರಾಟ ಮಾಡಿರುವುದು ಗೊತ್ತಾಗಿದೆ.

ಈ ಬೆಳವಣಿಗೆಯು ಪ್ರಕರಣಕ್ಕೆ ಪುಲ್ವಾಮಾ ನಂಟನ್ನು ಸೂಚಿಸಿದ್ದು, ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ಆಂದೋಲನ ಡೆಸ್ಕ್

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

18 mins ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

24 mins ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

28 mins ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

34 mins ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

39 mins ago