ದೇಶ- ವಿದೇಶ

ಐಎಸ್‌ಐ ಬೆಂಬಲಿತ ಶಸ್ತ್ರಾಸ್ತ್ರಾ ಕಳ್ಳಸಾಗಣೆ ಜಾಲ ಪತ್ತೆ : ಐವರ ಬಂಧನ

ಚಂಡೀಗಢ : ಪಾಕಿಸ್ತಾನದ ಐಎಸ್‌ಐ ಬೆಂಬಲಿತ ಹ್ಯಾಂಡ್ಲರ್‌ಗಳಿಂದ ನಿರ್ವಹಿಸಲ್ಪಡುತ್ತಿದ್ದ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಜಾಲವನ್ನು ಭೇದಿಸಿರುವ ಅಮೃತಸರ ಪೊಲೀಸರು, ಐವರನ್ನು ಬಂಧಿಸಿದ್ದಾರೆ ಎಂದು ಪಂಜಾಬ್ ಪೊಲೀಸ್ ಇಲಾಖೆಯ ಮಹಾ ನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.

ಆರೋಪಿಗಳಿಂದ ಎಕೆ ಸೈಗಾ 308 ಅಸಾಲ್ಟ್ ರೈಫಲ್, ಎರಡು ಮ್ಯಾಗಜೀನ್, ಎರಡು 9 ಎಂಎಂ ಗ್ಲಾಕ್ ಪಿಸ್ತೂಲ್, ಎಕೆ ರೈಫಲ್ನ 90 ಜೀವಂತ ಗುಂಡುಗಳನ್ನು ಸೇರಿದಂತೆ ರೂ. 7.50 ಲಕ್ಷ ನಗದು, ಒಂದು ಕಾರು ಮತ್ತು ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಯಾದವ್ ಮಾಹಿತಿ ನೀಡಿದ್ದಾರೆ.

ಆರೋಪಿಗಳು ಪಾಕಿಸ್ತಾನ ಮೂಲದ ಐಎಸ್‌ಐ ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆಂದು ತಿಳಿದುಬಂದಿದೆ. ವಶಪಡಿಸಿಕೊಂಡಿರುವ ಶಸ್ತ್ರಾಸ್ತ್ರಗಳನ್ನು ಗ್ಯಾಂಗ್‌ಸ್ಟರ್ ಜಗ್ಗು ಭಗವಾನ್ಪುರಿಯಾ ಆತನ ಸಹಚರ ನವ್ ಪಂಡೋರಿಗೆ ತಲುಪಿಸಲು ಉದ್ದೇಶಿಸಲಾಗಿತ್ತು ಎಂದು ಯಾದವ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಂಧಿತರನ್ನು ರಂಗರ್ ಗ್ರಾಮದ ನಿವಾಸಿಗಳಾದ ಜೋಬನ್ಜಿತ್ ಸಿಂಗ್ ಅಲಿಯಾಸ್ ಜೋಬನ್ ಮತ್ತು ಗೋರಾ ಸಿಂಗ್, ಅಮೃತಸರದ ರಸೂಲ್ಪುರ್ ಕಲ್ಲಾರ್‌ನ ಶೆನ್ಶನ್ ಅಲಿಯಾಸ್ ಶಾಲು ಮತ್ತು ಸನ್ನಿ ಸಿಂಗ್ ಹಾಗೂ ರೂಪನಗರದ ಜಸ್ಪ್ರೀತ್ ಸಿಂಗ್ ಅಲಿಯಾಸ್ ಮೋಟು ಎಂದು ಗುರುತಿಸಲಾಗಿದೆ ಎಂದು ಯಾದವ್ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

12 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

15 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

21 mins ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

27 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago