ದೇಶ- ವಿದೇಶ

ಕದನ ವಿರಾಮ ನಡುವೆಯೇ ಗಾಜಾ ಮೇಲೆ ಇಸ್ರೇಲ್ ಬಾಂಬ್ ದಾಳಿ : 27 ಮಂದಿ ಸಾವು

ಗಾಜಾ : ಗಾಜಾ ನಗರದ ಮೇಲೆ ಬುಧವಾರ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು, 27 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮವನ್ನು ಉಲ್ಲಂಘಿಸಿವೆ ಎಂದು ಎರಡು ದೇಶಗಳು ಪರಸ್ಪರ ಆರೋಪಿಸಿವೆ.

ಎರಡು ದೇಶಗಳ ನಡುವೆ ಕಳೆದ ತಿಂಗಳು ಕದನ ವಿರಾಮ ಜಾರಿಗೆ ಬಂದ ನಂತರ ಗಾಜಾದಲ್ಲಿ ನಡೆದ ಅತ್ಯಂತ ಮಾರಕ ದಾಳಿಗಳಲ್ಲಿ ಇದು ಸಹ ಒಂದು. ಕದನ ವಿರಾಮದ ಹೊರತಾಗಿ ಇಸ್ರೇಲ್ ಲೆಬನಾನ್‌ನ ಹಿಜ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸರಣಿ ದಾಳಿಗಳನ್ನು ಘೋಷಿಸಿದ ನಂತರ ಈ ದಾಳಿ ನಡೆದಿದೆ.

ಬುಧವಾರ ಉತ್ತರ ಗಾಜಾ ನಗರದಲ್ಲಿ 14 ಜನರು ಮತ್ತು ದಕ್ಷಿಣದ ಖಾನ್ ಯೂನಿಸ್ ಪ್ರದೇಶದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಪ್ರಾಧಿಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರದೇಶದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ:-ಕದನ ವಿರಾಮ ನಡುವೆಯೇ ಗಾಜಾ ಮೇಲೆ ಇಸ್ರೇಲ್ ಬಾಂಬ್ ದಾಳಿ : 27 ಮಂದಿ ಸಾವು

ಕದನ ವಿರಾಮ ಉಲ್ಲಂಘಿಸಿ ಹಮಾಸ್ ಉಗ್ರರು ಇಸ್ರೇಲ್ ಸೇನಾಪಡೆ ಕಾರ್ಯ ನಿರ್ವಹಿಸುತ್ತಿದ್ದ ಪ್ರದೇಶದ ಮೇಲೆ ದಾಳಿ ನಡೆಸಿದೆ ಎಂದು ಇಸ್ರೇಲ್ ತಿಳಿಸಿದೆ. ಈ ಆರೋಪ ನಿರಾಕರಿಸಿರುವ ಹಮಾಸ್, ಈ ಇಸ್ರೇಲ್ ಅಪಾಯಕಾರಿ ದಾಳಿ ನಡೆಸಿದೆ ಎಂದು ಆರೋಪಿಸಿದೆ. ಈ ದಾಳಿಯು ಕದನ ವಿರಾಮವನ್ನು ಅಪಾಯಕ್ಕೆ ಸಿಲುಕಿಸಬಹುದು.

ಕದನ ವಿರಾಮದಲ್ಲೂ ಇಸ್ರೇಲ್, ಹಮಾಸ್ ಅನ್ನು ಮಾತ್ರ ಗುರಿಯಾಗಿಸಲಾಗುತ್ತಿದೆ ಎಂದು ಹೇಳಿ ಪದೇ ಪದೆ ದಾಳಿ ನಡೆಸುತ್ತಿದೆ. ಪರಿಣಾಮವಾಗಿ 280 ಕ್ಕೂ ಹೆಚ್ಚು ಪ್ಯಾಲೆಸ್ಟೇನಿಯನ್ನರು ಸಾವನ್ನಪ್ಪಿದ್ದಾರೆ. ಎರಡು ದೇಶಗಳ ನಡುವೆ ಅಮೆರಿಕ ಮಧ್ಯಸ್ಥಿಕೆಯನ್ನು ಆಧರಿಸಿ ಒಪ್ಪಂದವಾಗಿದೆ. ಹಮಾಸ್ ಉಗ್ರರು ಒತ್ತಾಯಾಳಾಗಿರಿಸಿದ್ದ 48 ಮಂದಿಯನ್ನು ಇಸ್ರೇಲ್‌ಗೆ ಹಿಂದಿರುಗಿಸುವುದಕ್ಕೆ ಹಮಾಸ್ ಸಮ್ಮತಿ ನೀಡಿತ್ತು.

ಆಂದೋಲನ ಡೆಸ್ಕ್

Recent Posts

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

17 mins ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

1 hour ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

2 hours ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

2 hours ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

2 hours ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

3 hours ago