ದೇಶ- ವಿದೇಶ

ಕದನ ವಿರಾಮ ನಡುವೆಯೇ ಗಾಜಾ ಮೇಲೆ ಇಸ್ರೇಲ್ ಬಾಂಬ್ ದಾಳಿ : 27 ಮಂದಿ ಸಾವು

ಗಾಜಾ : ಗಾಜಾ ನಗರದ ಮೇಲೆ ಬುಧವಾರ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು, 27 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮವನ್ನು ಉಲ್ಲಂಘಿಸಿವೆ ಎಂದು ಎರಡು ದೇಶಗಳು ಪರಸ್ಪರ ಆರೋಪಿಸಿವೆ.

ಎರಡು ದೇಶಗಳ ನಡುವೆ ಕಳೆದ ತಿಂಗಳು ಕದನ ವಿರಾಮ ಜಾರಿಗೆ ಬಂದ ನಂತರ ಗಾಜಾದಲ್ಲಿ ನಡೆದ ಅತ್ಯಂತ ಮಾರಕ ದಾಳಿಗಳಲ್ಲಿ ಇದು ಸಹ ಒಂದು. ಕದನ ವಿರಾಮದ ಹೊರತಾಗಿ ಇಸ್ರೇಲ್ ಲೆಬನಾನ್‌ನ ಹಿಜ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸರಣಿ ದಾಳಿಗಳನ್ನು ಘೋಷಿಸಿದ ನಂತರ ಈ ದಾಳಿ ನಡೆದಿದೆ.

ಬುಧವಾರ ಉತ್ತರ ಗಾಜಾ ನಗರದಲ್ಲಿ 14 ಜನರು ಮತ್ತು ದಕ್ಷಿಣದ ಖಾನ್ ಯೂನಿಸ್ ಪ್ರದೇಶದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಪ್ರಾಧಿಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರದೇಶದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ:-ಕದನ ವಿರಾಮ ನಡುವೆಯೇ ಗಾಜಾ ಮೇಲೆ ಇಸ್ರೇಲ್ ಬಾಂಬ್ ದಾಳಿ : 27 ಮಂದಿ ಸಾವು

ಕದನ ವಿರಾಮ ಉಲ್ಲಂಘಿಸಿ ಹಮಾಸ್ ಉಗ್ರರು ಇಸ್ರೇಲ್ ಸೇನಾಪಡೆ ಕಾರ್ಯ ನಿರ್ವಹಿಸುತ್ತಿದ್ದ ಪ್ರದೇಶದ ಮೇಲೆ ದಾಳಿ ನಡೆಸಿದೆ ಎಂದು ಇಸ್ರೇಲ್ ತಿಳಿಸಿದೆ. ಈ ಆರೋಪ ನಿರಾಕರಿಸಿರುವ ಹಮಾಸ್, ಈ ಇಸ್ರೇಲ್ ಅಪಾಯಕಾರಿ ದಾಳಿ ನಡೆಸಿದೆ ಎಂದು ಆರೋಪಿಸಿದೆ. ಈ ದಾಳಿಯು ಕದನ ವಿರಾಮವನ್ನು ಅಪಾಯಕ್ಕೆ ಸಿಲುಕಿಸಬಹುದು.

ಕದನ ವಿರಾಮದಲ್ಲೂ ಇಸ್ರೇಲ್, ಹಮಾಸ್ ಅನ್ನು ಮಾತ್ರ ಗುರಿಯಾಗಿಸಲಾಗುತ್ತಿದೆ ಎಂದು ಹೇಳಿ ಪದೇ ಪದೆ ದಾಳಿ ನಡೆಸುತ್ತಿದೆ. ಪರಿಣಾಮವಾಗಿ 280 ಕ್ಕೂ ಹೆಚ್ಚು ಪ್ಯಾಲೆಸ್ಟೇನಿಯನ್ನರು ಸಾವನ್ನಪ್ಪಿದ್ದಾರೆ. ಎರಡು ದೇಶಗಳ ನಡುವೆ ಅಮೆರಿಕ ಮಧ್ಯಸ್ಥಿಕೆಯನ್ನು ಆಧರಿಸಿ ಒಪ್ಪಂದವಾಗಿದೆ. ಹಮಾಸ್ ಉಗ್ರರು ಒತ್ತಾಯಾಳಾಗಿರಿಸಿದ್ದ 48 ಮಂದಿಯನ್ನು ಇಸ್ರೇಲ್‌ಗೆ ಹಿಂದಿರುಗಿಸುವುದಕ್ಕೆ ಹಮಾಸ್ ಸಮ್ಮತಿ ನೀಡಿತ್ತು.

ಆಂದೋಲನ ಡೆಸ್ಕ್

Recent Posts

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

39 mins ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

48 mins ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

49 mins ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

2 hours ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

2 hours ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

2 hours ago