ದೇಶ- ವಿದೇಶ

ಕದನ ವಿರಾಮ ನಡುವೆಯೇ ಗಾಜಾ ಮೇಲೆ ಇಸ್ರೇಲ್ ಬಾಂಬ್ ದಾಳಿ : 27 ಮಂದಿ ಸಾವು

ಗಾಜಾ : ಗಾಜಾ ನಗರದ ಮೇಲೆ ಬುಧವಾರ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು, 27 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮವನ್ನು ಉಲ್ಲಂಘಿಸಿವೆ ಎಂದು ಎರಡು ದೇಶಗಳು ಪರಸ್ಪರ ಆರೋಪಿಸಿವೆ.

ಎರಡು ದೇಶಗಳ ನಡುವೆ ಕಳೆದ ತಿಂಗಳು ಕದನ ವಿರಾಮ ಜಾರಿಗೆ ಬಂದ ನಂತರ ಗಾಜಾದಲ್ಲಿ ನಡೆದ ಅತ್ಯಂತ ಮಾರಕ ದಾಳಿಗಳಲ್ಲಿ ಇದು ಸಹ ಒಂದು. ಕದನ ವಿರಾಮದ ಹೊರತಾಗಿ ಇಸ್ರೇಲ್ ಲೆಬನಾನ್‌ನ ಹಿಜ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸರಣಿ ದಾಳಿಗಳನ್ನು ಘೋಷಿಸಿದ ನಂತರ ಈ ದಾಳಿ ನಡೆದಿದೆ.

ಬುಧವಾರ ಉತ್ತರ ಗಾಜಾ ನಗರದಲ್ಲಿ 14 ಜನರು ಮತ್ತು ದಕ್ಷಿಣದ ಖಾನ್ ಯೂನಿಸ್ ಪ್ರದೇಶದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಪ್ರಾಧಿಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರದೇಶದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ:-ಕದನ ವಿರಾಮ ನಡುವೆಯೇ ಗಾಜಾ ಮೇಲೆ ಇಸ್ರೇಲ್ ಬಾಂಬ್ ದಾಳಿ : 27 ಮಂದಿ ಸಾವು

ಕದನ ವಿರಾಮ ಉಲ್ಲಂಘಿಸಿ ಹಮಾಸ್ ಉಗ್ರರು ಇಸ್ರೇಲ್ ಸೇನಾಪಡೆ ಕಾರ್ಯ ನಿರ್ವಹಿಸುತ್ತಿದ್ದ ಪ್ರದೇಶದ ಮೇಲೆ ದಾಳಿ ನಡೆಸಿದೆ ಎಂದು ಇಸ್ರೇಲ್ ತಿಳಿಸಿದೆ. ಈ ಆರೋಪ ನಿರಾಕರಿಸಿರುವ ಹಮಾಸ್, ಈ ಇಸ್ರೇಲ್ ಅಪಾಯಕಾರಿ ದಾಳಿ ನಡೆಸಿದೆ ಎಂದು ಆರೋಪಿಸಿದೆ. ಈ ದಾಳಿಯು ಕದನ ವಿರಾಮವನ್ನು ಅಪಾಯಕ್ಕೆ ಸಿಲುಕಿಸಬಹುದು.

ಕದನ ವಿರಾಮದಲ್ಲೂ ಇಸ್ರೇಲ್, ಹಮಾಸ್ ಅನ್ನು ಮಾತ್ರ ಗುರಿಯಾಗಿಸಲಾಗುತ್ತಿದೆ ಎಂದು ಹೇಳಿ ಪದೇ ಪದೆ ದಾಳಿ ನಡೆಸುತ್ತಿದೆ. ಪರಿಣಾಮವಾಗಿ 280 ಕ್ಕೂ ಹೆಚ್ಚು ಪ್ಯಾಲೆಸ್ಟೇನಿಯನ್ನರು ಸಾವನ್ನಪ್ಪಿದ್ದಾರೆ. ಎರಡು ದೇಶಗಳ ನಡುವೆ ಅಮೆರಿಕ ಮಧ್ಯಸ್ಥಿಕೆಯನ್ನು ಆಧರಿಸಿ ಒಪ್ಪಂದವಾಗಿದೆ. ಹಮಾಸ್ ಉಗ್ರರು ಒತ್ತಾಯಾಳಾಗಿರಿಸಿದ್ದ 48 ಮಂದಿಯನ್ನು ಇಸ್ರೇಲ್‌ಗೆ ಹಿಂದಿರುಗಿಸುವುದಕ್ಕೆ ಹಮಾಸ್ ಸಮ್ಮತಿ ನೀಡಿತ್ತು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago