ದೇಶ- ವಿದೇಶ

Israel-Iran War : ಅಮೆರಿಕಾಗೆ ಎಚ್ಚರಿಗೆ ನೀಡಿದ ಇರಾನ್‌

ಟೆಹರಾನ್‌ : ಇರಾನ್‌, ಇಸ್ರೇಲ್‌ ಮೇಲೆ ಪೂರ್ಣ ಪ್ರಮಾಣದ ಯುದ್ಧ ಘೋಷಿಸಿದೆ. ಈ ಬೆನ್ನಲ್ಲೇ ಮಿತ್ರ ರಾಷ್ಟ್ರ ಇಸ್ರೇಲ್‌ ಬೆಂಬಲಿಸಿ ಯುದ್ಧದಲ್ಲಿ ಮಧ್ಯಪ್ರವೇಶಿಸುವ ಅಮೆರಿಕ ಪ್ರಯತ್ನಕ್ಕೆ ಇರಾನ್‌ ಎಚ್ಚರಿಕೆ ನೀಡಿದೆ.

ಯುದ್ಧದಲ್ಲಿ ನೀವು (ಅಮೆರಿಕ) ಇಸ್ರೇಲ್‌ ಅನ್ನು ಬೆಂಬಲಿಸಿದರೆ ಪ್ರತಿರೋಧ ಒಡ್ಡಲು ನಾವು ಸಿದ್ಧ ಎಂದು ಇರಾನ್‌ನ ಉಪ ವಿದೇಶಾಂಗ ಸಚಿವ ಹೇಳಿದ್ದಾರೆ.

ಯಹೂದಿಗಳ ಪರವಾಗಿ ಅಮೆರಿಕ ಯುದ್ಧದಲ್ಲಿ ಸಕ್ರಿಯವಾಗಿ ಪ್ರವೇಶಿಸಲು ಬಂದರೆ, ಆಕ್ರಮಣಕಾರರಿಗೆ ಪಾಠ ಕಲಿಸಲು, ರಾಷ್ಟ್ರೀಯ ಭದ್ರತೆ ಹಾಗೂ ಹಿತಾಸಕ್ತಿಯನ್ನು ರಕ್ಷಿಸಲು ಇರಾನ್‌ ತನ್ನ ಆಯುದ್ಧಗಳನ್ನು ಬಳಸಬೇಕಾಗುತ್ತದೆ ಎಂದು ವಿದೇಶಾಂಗ ಸಚಿವ ಕಾಝೆಂ ಘರಿಬಾಬಾದಿ ಎಚ್ಚರಿಕೆ ನೀಡಿದ್ದಾರೆ.

ಇರಾನ್‌ ʻಟ್ರು ಪ್ರಾಮಿಸ್‌ 3ʼ ಕಾರ್ಯಚರಣೆಯ 12ನೇ ಅಲೆಯ ಭಾಗವಾಗ ಅತಿ ಭಾರದ, ಧೀರ್ಘ ಶ್ರೇಣಿಯ ಎರಡು ಹಂತದ ಸಿಜ್ಜೀಲ್‌ ಕ್ರಿಪಣಿ ದಾಳಿಯನ್ನು ಪ್ರಾರಂಭಿಸಿರುವದಾಗಿ ಇರಾನ್‌ ಘೋಷಿಸಿದೆ.

ತಮ್ಮ(ಇರಾನ್) ದೇಶದ ಹಿತಾಶಕ್ತಿ ಕಾಪಾಡುವ ನಿಟ್ಟಿನಲ್ಲಿ ಸೇನಾ ತೀರ್ಮಾನವನ್ನು ಮಾಡುವ ಅಧಿಕಾರಿಗಳಿಗೆ ಎಲ್ಲಾ ಆಯ್ಕೆಗಳು ಮುಂದಿವೆ ಎಂದು ಅವರು ಹೇಳಿರುವುದಾಗಿ ಅಲ್ಲಿನ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ‌

ಆಂದೋಲನ ಡೆಸ್ಕ್

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

29 mins ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

1 hour ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

1 hour ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

2 hours ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

2 hours ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

2 hours ago