ದೇಶ- ವಿದೇಶ

ಕದನ ವಿರಾಮ ನಡುವೆಯೇ ಇಸೇಲ್‌ ಸೇನೆಯಿಂದ ಗಾಜಾ ಮೇಲೆ ದಾಳಿ

ಗಾಜಾ : ತಾತ್ಕಾಲಿಕ ಕದನ ವಿರಾಮ ಒಪ್ಪಂದದ ನಡುವೆಯೇ, ಇಸ್ರೇಲಿ ಸೇನೆ ಭಾನುವಾರ ಪ್ಯಾಲೆಸ್ತೀನ್‌ನ ರಫಾ ಹಾಗೂ ದಕ್ಷಿಣ ಗಾಜಾದ ವಿವಿಧೆಡೆ ದಾಳಿ ನಡೆಸಿದೆ ಎಂದು ಇಸ್ರೇಲಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಪರಿಸ್ಥಿತಿಯ ಕುರಿತು ಪ್ರಧಾನಿ ಬೆಂಜಮಿನ್ ನೆತನ್ಯಾಹು, ರಕ್ಷಣಾ ಸಚಿವ ಇಸ್ರೇಲ್ ಕಾತ್ಜ್ ಹಾಗೂ ಸೇನೆಯ ಹಿರಿಯ ಅಧಿಕಾರಿಗಳ ನಡುವೆ ದೂರವಾಣಿ ಮೂಲಕ ಮಾತುಕತೆ ನಡೆದಿದೆ ಎಂದು ಇಸ್ರೇಲ್‌ನ ಪ್ರಸಾರಕ ಚಾನೆಲ್ 12 ತಿಳಿಸಿದೆ.

ಇಸ್ರೇಲ್‌ನ ಸಾರ್ವಜನಿಕ ಪ್ರಸಾರ ಸಂಸ್ಥೆಯ ಪ್ರಕಾರ, ಈ ದಾಳಿಯನ್ನು ಹಮಾಸ್ ಸದಸ್ಯರೊಂದಿಗೆ ನಡೆದ ಗುಂಡಿನ ದಾಳಿಗೆ ಪ್ರತಿಯಾಗಿ ನಡೆಸಲಾಗಿದೆ. ರಫಾದಲ್ಲಿ ಐಇಡಿ ಸ್ಫೋಟಗೊಂಡು ಇಸ್ರೇಲಿ ಸೈನಿಕರಿಗೆ ಗಾಯಗಳಾಗಿದ್ದವು. ಅಲ್ಲದೇ ಈ ಘಟನೆಯ ಹಿಂದೆ ಇಸ್ರೇಲ್ ಸೇನೆಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ಸಶಸ್ತ್ರ ಗುಂಪಿನ ಕೈವಾಡವಿದೆ ಎಂದು ಕತಾರ್‌ ನಿಯಂತ್ರಣದ ಅಲ್ ಜಜೀರಾ ವಾಹಿನಿ ವರದಿ ಮಾಡಿದೆ.

ಇದನ್ನು ಓದಿ; ಆತಂಕದ ಮಧ್ಯೆ ಕದನ ವಿರಾಮ-ಗೆದ್ದವರು ಯಾರು?

“ಹಮಾಸ್ ಅನ್ನು ಸಂಪೂರ್ಣವಾಗಿ ನಿಶಸ್ತ್ರೀಕರಣ ಮತ್ತು ಪ್ಯಾಲೆಸ್ತೀನ್‌ ಪ್ರದೇಶವನ್ನು ಸಶಸ್ತ್ರೀಕರಣಗೊಳಿಸಿದಾಗ ಮಾತ್ರ ಗಾಜಾದಲ್ಲಿ ಯುದ್ಧ ಅಂತ್ಯವಾಗಲಿದೆ. ಸುಲಭವಾಗಲಿ, ಕಠಿಣವಾಗಲಿ… ಈ ಗುರಿ ಈಡೇರಿದಾಗ ಯುದ್ಧ ಕೊನೆಗೊಳ್ಳುತ್ತದೆ” ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಬಸ್ ಮೇಲೆ ಇಸ್ರೇಲ್ ಟ್ಯಾಂಕ್ ದಾಳಿ ಬಳಿಕ, ಇಬ್ಬರು ಪುರುಷರು, ಮೂವರು ಮಹಿಳೆಯರು ಮತ್ತು ನಾಲ್ವರು ಮಕ್ಕಳ ಮೃತದೇಹಗಳನ್ನು ಪತ್ತೆಯಾಗಿವೆ ಎಂದು ಹಮಾಸ್ ನಿಯತ್ರಣದಲ್ಲಿರುವ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

“ರಫಾ ಪ್ರದೇಶದಲ್ಲಿ ಅನೇಕ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿರಲಿಲ್ಲ. ಅದೇ ದಿನ ಖಾನ್ ಯೂನಿಸ್‌ನಲ್ಲಿಯೂ ಸೇನಾ ಪಡೆಗಳೆಡೆಗೆ ನುಗ್ಗುತ್ತಿದ್ದ ಮತ್ತೊಂದು ಉಗ್ರರ ಗುಂಪನ್ನು ಹೊಡೆದುರುಳಿಸಲಾಗಿದೆ” ಎಂದು ಶುಕ್ರವಾರ ಇಸ್ರೇಲ್ ಸೇನೆ ಹೇಳಿತ್ತು.

ಈ ದಾಳಿಗಳ ಬಳಿಕ ಕದನ ವಿರಾಮ ಉಲ್ಲಂಘನೆ ಮಾಡಲಾಗಿದೆ ಎಂದು ಇಸ್ರೇಲ್ ಮತ್ತು ಹಮಾಸ್ ಪರಸ್ಪರ ಆರೋಪ ಮಾಡಿಕೊಂಡಿವೆ. ಅಮೆರಿಕ ಮಧ್ಯಸ್ಥಿಕೆಯಲ್ಲಿ ನಡೆದ ಕದನ ವಿರಾಮ ಒಪ್ಪಂದದ ಪ್ರಕಾರ, ಹಮಾಸ್ ಎಲ್ಲ 20 ಇಸ್ರೇಲಿ ಒತ್ತೆಯಾಳುಗಳನ್ನು ಮತ್ತು 12 ಮೃತದೇಹಗಳನ್ನು ಮರಳಿಸುವ ಮಾತುಕತೆಯಾಗಿತ್ತು. ಇದೀಗ ಗಾಜಾದ ಅವಶೇಷಗಳಡಿ ಸಿಲಿಕಿರುವ ಉಳಿದ ಮೃತದೇಹಗಳನ್ನು ಪತ್ತೆಹಚ್ಚಲು ಸಮಯ ಮತ್ತು ತಾಂತ್ರಿಕ ಸಹಾಯದ ಅಗತ್ಯವಿದೆ ಎಂದು ಹಮಾಸ್ ಹೇಳಿದೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

12 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

12 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

13 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

13 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

13 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

13 hours ago