An Israeli army soldier covers his ears as a self-propelled artillery howitzer fires rounds from a position near the border with the Gaza Strip in southern Israel on November 6, 2023 amid the ongoing battles between Israel and the Palestinian group Hamas in the Gaza Strip. (Photo by MENAHEM KAHANA / AFP) (Photo by MENAHEM KAHANA/AFP via Getty Images)
ಗಾಜಾ : ತಾತ್ಕಾಲಿಕ ಕದನ ವಿರಾಮ ಒಪ್ಪಂದದ ನಡುವೆಯೇ, ಇಸ್ರೇಲಿ ಸೇನೆ ಭಾನುವಾರ ಪ್ಯಾಲೆಸ್ತೀನ್ನ ರಫಾ ಹಾಗೂ ದಕ್ಷಿಣ ಗಾಜಾದ ವಿವಿಧೆಡೆ ದಾಳಿ ನಡೆಸಿದೆ ಎಂದು ಇಸ್ರೇಲಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ.
ಪರಿಸ್ಥಿತಿಯ ಕುರಿತು ಪ್ರಧಾನಿ ಬೆಂಜಮಿನ್ ನೆತನ್ಯಾಹು, ರಕ್ಷಣಾ ಸಚಿವ ಇಸ್ರೇಲ್ ಕಾತ್ಜ್ ಹಾಗೂ ಸೇನೆಯ ಹಿರಿಯ ಅಧಿಕಾರಿಗಳ ನಡುವೆ ದೂರವಾಣಿ ಮೂಲಕ ಮಾತುಕತೆ ನಡೆದಿದೆ ಎಂದು ಇಸ್ರೇಲ್ನ ಪ್ರಸಾರಕ ಚಾನೆಲ್ 12 ತಿಳಿಸಿದೆ.
ಇಸ್ರೇಲ್ನ ಸಾರ್ವಜನಿಕ ಪ್ರಸಾರ ಸಂಸ್ಥೆಯ ಪ್ರಕಾರ, ಈ ದಾಳಿಯನ್ನು ಹಮಾಸ್ ಸದಸ್ಯರೊಂದಿಗೆ ನಡೆದ ಗುಂಡಿನ ದಾಳಿಗೆ ಪ್ರತಿಯಾಗಿ ನಡೆಸಲಾಗಿದೆ. ರಫಾದಲ್ಲಿ ಐಇಡಿ ಸ್ಫೋಟಗೊಂಡು ಇಸ್ರೇಲಿ ಸೈನಿಕರಿಗೆ ಗಾಯಗಳಾಗಿದ್ದವು. ಅಲ್ಲದೇ ಈ ಘಟನೆಯ ಹಿಂದೆ ಇಸ್ರೇಲ್ ಸೇನೆಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ಸಶಸ್ತ್ರ ಗುಂಪಿನ ಕೈವಾಡವಿದೆ ಎಂದು ಕತಾರ್ ನಿಯಂತ್ರಣದ ಅಲ್ ಜಜೀರಾ ವಾಹಿನಿ ವರದಿ ಮಾಡಿದೆ.
ಇದನ್ನು ಓದಿ; ಆತಂಕದ ಮಧ್ಯೆ ಕದನ ವಿರಾಮ-ಗೆದ್ದವರು ಯಾರು?
“ಹಮಾಸ್ ಅನ್ನು ಸಂಪೂರ್ಣವಾಗಿ ನಿಶಸ್ತ್ರೀಕರಣ ಮತ್ತು ಪ್ಯಾಲೆಸ್ತೀನ್ ಪ್ರದೇಶವನ್ನು ಸಶಸ್ತ್ರೀಕರಣಗೊಳಿಸಿದಾಗ ಮಾತ್ರ ಗಾಜಾದಲ್ಲಿ ಯುದ್ಧ ಅಂತ್ಯವಾಗಲಿದೆ. ಸುಲಭವಾಗಲಿ, ಕಠಿಣವಾಗಲಿ… ಈ ಗುರಿ ಈಡೇರಿದಾಗ ಯುದ್ಧ ಕೊನೆಗೊಳ್ಳುತ್ತದೆ” ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.
ಬಸ್ ಮೇಲೆ ಇಸ್ರೇಲ್ ಟ್ಯಾಂಕ್ ದಾಳಿ ಬಳಿಕ, ಇಬ್ಬರು ಪುರುಷರು, ಮೂವರು ಮಹಿಳೆಯರು ಮತ್ತು ನಾಲ್ವರು ಮಕ್ಕಳ ಮೃತದೇಹಗಳನ್ನು ಪತ್ತೆಯಾಗಿವೆ ಎಂದು ಹಮಾಸ್ ನಿಯತ್ರಣದಲ್ಲಿರುವ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.
“ರಫಾ ಪ್ರದೇಶದಲ್ಲಿ ಅನೇಕ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿರಲಿಲ್ಲ. ಅದೇ ದಿನ ಖಾನ್ ಯೂನಿಸ್ನಲ್ಲಿಯೂ ಸೇನಾ ಪಡೆಗಳೆಡೆಗೆ ನುಗ್ಗುತ್ತಿದ್ದ ಮತ್ತೊಂದು ಉಗ್ರರ ಗುಂಪನ್ನು ಹೊಡೆದುರುಳಿಸಲಾಗಿದೆ” ಎಂದು ಶುಕ್ರವಾರ ಇಸ್ರೇಲ್ ಸೇನೆ ಹೇಳಿತ್ತು.
ಈ ದಾಳಿಗಳ ಬಳಿಕ ಕದನ ವಿರಾಮ ಉಲ್ಲಂಘನೆ ಮಾಡಲಾಗಿದೆ ಎಂದು ಇಸ್ರೇಲ್ ಮತ್ತು ಹಮಾಸ್ ಪರಸ್ಪರ ಆರೋಪ ಮಾಡಿಕೊಂಡಿವೆ. ಅಮೆರಿಕ ಮಧ್ಯಸ್ಥಿಕೆಯಲ್ಲಿ ನಡೆದ ಕದನ ವಿರಾಮ ಒಪ್ಪಂದದ ಪ್ರಕಾರ, ಹಮಾಸ್ ಎಲ್ಲ 20 ಇಸ್ರೇಲಿ ಒತ್ತೆಯಾಳುಗಳನ್ನು ಮತ್ತು 12 ಮೃತದೇಹಗಳನ್ನು ಮರಳಿಸುವ ಮಾತುಕತೆಯಾಗಿತ್ತು. ಇದೀಗ ಗಾಜಾದ ಅವಶೇಷಗಳಡಿ ಸಿಲಿಕಿರುವ ಉಳಿದ ಮೃತದೇಹಗಳನ್ನು ಪತ್ತೆಹಚ್ಚಲು ಸಮಯ ಮತ್ತು ತಾಂತ್ರಿಕ ಸಹಾಯದ ಅಗತ್ಯವಿದೆ ಎಂದು ಹಮಾಸ್ ಹೇಳಿದೆ.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…