ದೇಶ- ವಿದೇಶ

ಕದನ ವಿರಾಮ ನಡುವೆಯೇ ಇಸೇಲ್‌ ಸೇನೆಯಿಂದ ಗಾಜಾ ಮೇಲೆ ದಾಳಿ

ಗಾಜಾ : ತಾತ್ಕಾಲಿಕ ಕದನ ವಿರಾಮ ಒಪ್ಪಂದದ ನಡುವೆಯೇ, ಇಸ್ರೇಲಿ ಸೇನೆ ಭಾನುವಾರ ಪ್ಯಾಲೆಸ್ತೀನ್‌ನ ರಫಾ ಹಾಗೂ ದಕ್ಷಿಣ ಗಾಜಾದ ವಿವಿಧೆಡೆ ದಾಳಿ ನಡೆಸಿದೆ ಎಂದು ಇಸ್ರೇಲಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಪರಿಸ್ಥಿತಿಯ ಕುರಿತು ಪ್ರಧಾನಿ ಬೆಂಜಮಿನ್ ನೆತನ್ಯಾಹು, ರಕ್ಷಣಾ ಸಚಿವ ಇಸ್ರೇಲ್ ಕಾತ್ಜ್ ಹಾಗೂ ಸೇನೆಯ ಹಿರಿಯ ಅಧಿಕಾರಿಗಳ ನಡುವೆ ದೂರವಾಣಿ ಮೂಲಕ ಮಾತುಕತೆ ನಡೆದಿದೆ ಎಂದು ಇಸ್ರೇಲ್‌ನ ಪ್ರಸಾರಕ ಚಾನೆಲ್ 12 ತಿಳಿಸಿದೆ.

ಇಸ್ರೇಲ್‌ನ ಸಾರ್ವಜನಿಕ ಪ್ರಸಾರ ಸಂಸ್ಥೆಯ ಪ್ರಕಾರ, ಈ ದಾಳಿಯನ್ನು ಹಮಾಸ್ ಸದಸ್ಯರೊಂದಿಗೆ ನಡೆದ ಗುಂಡಿನ ದಾಳಿಗೆ ಪ್ರತಿಯಾಗಿ ನಡೆಸಲಾಗಿದೆ. ರಫಾದಲ್ಲಿ ಐಇಡಿ ಸ್ಫೋಟಗೊಂಡು ಇಸ್ರೇಲಿ ಸೈನಿಕರಿಗೆ ಗಾಯಗಳಾಗಿದ್ದವು. ಅಲ್ಲದೇ ಈ ಘಟನೆಯ ಹಿಂದೆ ಇಸ್ರೇಲ್ ಸೇನೆಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ಸಶಸ್ತ್ರ ಗುಂಪಿನ ಕೈವಾಡವಿದೆ ಎಂದು ಕತಾರ್‌ ನಿಯಂತ್ರಣದ ಅಲ್ ಜಜೀರಾ ವಾಹಿನಿ ವರದಿ ಮಾಡಿದೆ.

ಇದನ್ನು ಓದಿ; ಆತಂಕದ ಮಧ್ಯೆ ಕದನ ವಿರಾಮ-ಗೆದ್ದವರು ಯಾರು?

“ಹಮಾಸ್ ಅನ್ನು ಸಂಪೂರ್ಣವಾಗಿ ನಿಶಸ್ತ್ರೀಕರಣ ಮತ್ತು ಪ್ಯಾಲೆಸ್ತೀನ್‌ ಪ್ರದೇಶವನ್ನು ಸಶಸ್ತ್ರೀಕರಣಗೊಳಿಸಿದಾಗ ಮಾತ್ರ ಗಾಜಾದಲ್ಲಿ ಯುದ್ಧ ಅಂತ್ಯವಾಗಲಿದೆ. ಸುಲಭವಾಗಲಿ, ಕಠಿಣವಾಗಲಿ… ಈ ಗುರಿ ಈಡೇರಿದಾಗ ಯುದ್ಧ ಕೊನೆಗೊಳ್ಳುತ್ತದೆ” ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಬಸ್ ಮೇಲೆ ಇಸ್ರೇಲ್ ಟ್ಯಾಂಕ್ ದಾಳಿ ಬಳಿಕ, ಇಬ್ಬರು ಪುರುಷರು, ಮೂವರು ಮಹಿಳೆಯರು ಮತ್ತು ನಾಲ್ವರು ಮಕ್ಕಳ ಮೃತದೇಹಗಳನ್ನು ಪತ್ತೆಯಾಗಿವೆ ಎಂದು ಹಮಾಸ್ ನಿಯತ್ರಣದಲ್ಲಿರುವ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

“ರಫಾ ಪ್ರದೇಶದಲ್ಲಿ ಅನೇಕ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿರಲಿಲ್ಲ. ಅದೇ ದಿನ ಖಾನ್ ಯೂನಿಸ್‌ನಲ್ಲಿಯೂ ಸೇನಾ ಪಡೆಗಳೆಡೆಗೆ ನುಗ್ಗುತ್ತಿದ್ದ ಮತ್ತೊಂದು ಉಗ್ರರ ಗುಂಪನ್ನು ಹೊಡೆದುರುಳಿಸಲಾಗಿದೆ” ಎಂದು ಶುಕ್ರವಾರ ಇಸ್ರೇಲ್ ಸೇನೆ ಹೇಳಿತ್ತು.

ಈ ದಾಳಿಗಳ ಬಳಿಕ ಕದನ ವಿರಾಮ ಉಲ್ಲಂಘನೆ ಮಾಡಲಾಗಿದೆ ಎಂದು ಇಸ್ರೇಲ್ ಮತ್ತು ಹಮಾಸ್ ಪರಸ್ಪರ ಆರೋಪ ಮಾಡಿಕೊಂಡಿವೆ. ಅಮೆರಿಕ ಮಧ್ಯಸ್ಥಿಕೆಯಲ್ಲಿ ನಡೆದ ಕದನ ವಿರಾಮ ಒಪ್ಪಂದದ ಪ್ರಕಾರ, ಹಮಾಸ್ ಎಲ್ಲ 20 ಇಸ್ರೇಲಿ ಒತ್ತೆಯಾಳುಗಳನ್ನು ಮತ್ತು 12 ಮೃತದೇಹಗಳನ್ನು ಮರಳಿಸುವ ಮಾತುಕತೆಯಾಗಿತ್ತು. ಇದೀಗ ಗಾಜಾದ ಅವಶೇಷಗಳಡಿ ಸಿಲಿಕಿರುವ ಉಳಿದ ಮೃತದೇಹಗಳನ್ನು ಪತ್ತೆಹಚ್ಚಲು ಸಮಯ ಮತ್ತು ತಾಂತ್ರಿಕ ಸಹಾಯದ ಅಗತ್ಯವಿದೆ ಎಂದು ಹಮಾಸ್ ಹೇಳಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

3 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

3 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

3 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

4 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

6 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

6 hours ago