ದೇಶ- ವಿದೇಶ

ಗಾಜಾದಲ್ಲಿ ಮುಂದುವರಿದ ಇಸ್ರೇಲ್‌ ದಾಳಿ: 100ಕ್ಕೂ ಹೆಚ್ಚು ಜನರು ಸಾವು

ಗಾಜಾ: ಗಾಜಾದಲ್ಲಿ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಶಾಲೆಯೊಂದರ  ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಮೃತಪಟ್ಟಿದ್ದಾರೆ.

ಗಾಜಾದ ಅಲ್-ತಬಾಯೀನ್‌ ಶಾಲೆಯಲ್ಲಿ ಮುಂಜಾನೆ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಈ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಅಲ್‌ ತಬಾಯೀನ್‌ ಶಾಲೆಯಲ್ಲಿ ಅಡಗಿಕೊಂಡಿರುವ ಹಮಾಸ್‌ ಕಮಾಂಡ್‌ ಮತ್ತು ಕಂಟ್ರೋಲ್‌ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಐಎಎಫ್‌ ಮಾಹಿತಿ ನೀಡಿದೆ.

ದಾಳಿಗೂ ಮುನ್ನ ನಾಗರಿಕರಿಗೆ ಅಪಾಯವಾಗುವುದನ್ನು ತಪ್ಪಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಆದರೂ ಇಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿಸಲಾಗಿದೆ.

ಘಟನೆಯಲ್ಲಿ 50ಕ್ಕೂ ಹೆಚ್ಚು ನಾಗರಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

28 mins ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

17 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

18 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

18 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

24 hours ago