ದೇಶ- ವಿದೇಶ

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಇಸ್ರೋ: ಜಿಎಸ್‌ಎಲ್‌ವಿ ರಾಕೆಟ್‌ ಉಡಾವಣೆ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಇಂದು ಶತಕದ ಸಾಧನೆ ಮಾಡಿ ಸಂಭ್ರಮಿಸಿದೆ.

ಇಂದು ಬೆಳಿಗ್ಗೆ 100ನೇ ರಾಕೆಟ್‌ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಇಸ್ರೋ ವಿಶಿಷ್ಟ ಸಾಧನೆ ಮಾಡಿದೆ.

ಇಂದು ಬೆಳಿಗ್ಗೆ 6.30ಕ್ಕೆ ಆಂಧ್ರಪ್ರದೇಶದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಜಿಯೋಸಿಂಕ್ರನೈಸ್‌ ಸ್ಯಾಟಲೈಟ್‌ ಲಾಂಚ್‌ ವೆಹಿಕಲ್‌ ಮೂಲಕ ನಾವಿಕ್‌ ಯೋಜನೆಯ ಎರಡನೇ ತಲೆಮಾರಿನ ಉಪಗ್ರಹ ಎನ್‌ವಿಎಸ್‌-02 ಉಡಾವಣೆಯನ್ನು ಯಶಸ್ವಿಗೊಳಿಸಿದೆ.

ಉಪಗ್ರಹ ಉಡಾವಣೆಯಾದ ಬಳಿಕ ಮಾತನಾಡಿದ ಇಸ್ರೋ ಮುಖ್ಯಸ್ಥ ನಾರಾಯಣನ್‌ ಅವರು, ನಿಗದಿ ಪಡಿಸಿದ ಕಕ್ಷೆಗೆ ಉಪಗ್ರಹ ನಿಖರವಾಗಿ ತಲುಪಿದೆ. 100ನೇ ಉಡಾವಣೆ ಇಸ್ರೋ ಪಾಲಿಗೆ ಮಹತ್ವದ ಮೈಲಿಗಲ್ಲು ಎಂದು ಸಂತಸ ವ್ಯಕ್ತಪಡಿಸಿದರು.

ಎನ್‌ವಿಎಸ್-೦೨ ಉಪಗ್ರಹದ ವೈಶಿಷ್ಟ್ಯಗಳು:

ಎನ್‌ವಿಎಸ್-೦೨ ಉಪಗ್ರಹವು ಎರಡನೇ ತಲೆಮಾರಿನ ನ್ಯಾವಿಕ್ ಉಪಗ್ರಹಗಳ ಭಾಗವಾಗಿದ್ದು, ೧-೨ಕೆ ಬಸ್ ಪ್ಲಾಟ್‌ಫಾರ್ಮ್ ಅನ್ನು ಬಳಸುತ್ತದೆ. ಈ ಉಪಗ್ರಹ ೨,೨೫೦ ಕೆಜಿ ತೂಕವಿದ್ದು, ಸುಮಾರು ೩ ಕಿ.ವ್ಯಾಟ್ ವಿದ್ಯುತ್ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಎಲ್೧, ಎಲ್೫ ಮತ್ತು ಎಸ್ ಬ್ಯಾಂಡ್ ಗಳಲ್ಲಿ ನ್ಯಾವಿಗೇಷನ್ ಪೇಲೋಡ್‌ಗಳನ್ನು ಮತ್ತು ಅ-ಬ್ಯಾಂಡ್‌ನಲ್ಲಿ ರೇಂಡಿಂಗ್ ಪೇಲೋಡ್ ಅನ್ನು ಹೊಂದಿರುತ್ತದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

17 mins ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

25 mins ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

26 mins ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

1 hour ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

1 hour ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

2 hours ago