ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಇಂದು ಶತಕದ ಸಾಧನೆ ಮಾಡಿ ಸಂಭ್ರಮಿಸಿದೆ.
ಇಂದು ಬೆಳಿಗ್ಗೆ 100ನೇ ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಇಸ್ರೋ ವಿಶಿಷ್ಟ ಸಾಧನೆ ಮಾಡಿದೆ.
ಇಂದು ಬೆಳಿಗ್ಗೆ 6.30ಕ್ಕೆ ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಯೋಸಿಂಕ್ರನೈಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮೂಲಕ ನಾವಿಕ್ ಯೋಜನೆಯ ಎರಡನೇ ತಲೆಮಾರಿನ ಉಪಗ್ರಹ ಎನ್ವಿಎಸ್-02 ಉಡಾವಣೆಯನ್ನು ಯಶಸ್ವಿಗೊಳಿಸಿದೆ.
ಉಪಗ್ರಹ ಉಡಾವಣೆಯಾದ ಬಳಿಕ ಮಾತನಾಡಿದ ಇಸ್ರೋ ಮುಖ್ಯಸ್ಥ ನಾರಾಯಣನ್ ಅವರು, ನಿಗದಿ ಪಡಿಸಿದ ಕಕ್ಷೆಗೆ ಉಪಗ್ರಹ ನಿಖರವಾಗಿ ತಲುಪಿದೆ. 100ನೇ ಉಡಾವಣೆ ಇಸ್ರೋ ಪಾಲಿಗೆ ಮಹತ್ವದ ಮೈಲಿಗಲ್ಲು ಎಂದು ಸಂತಸ ವ್ಯಕ್ತಪಡಿಸಿದರು.
ಎನ್ವಿಎಸ್-೦೨ ಉಪಗ್ರಹದ ವೈಶಿಷ್ಟ್ಯಗಳು:
ಎನ್ವಿಎಸ್-೦೨ ಉಪಗ್ರಹವು ಎರಡನೇ ತಲೆಮಾರಿನ ನ್ಯಾವಿಕ್ ಉಪಗ್ರಹಗಳ ಭಾಗವಾಗಿದ್ದು, ೧-೨ಕೆ ಬಸ್ ಪ್ಲಾಟ್ಫಾರ್ಮ್ ಅನ್ನು ಬಳಸುತ್ತದೆ. ಈ ಉಪಗ್ರಹ ೨,೨೫೦ ಕೆಜಿ ತೂಕವಿದ್ದು, ಸುಮಾರು ೩ ಕಿ.ವ್ಯಾಟ್ ವಿದ್ಯುತ್ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಎಲ್೧, ಎಲ್೫ ಮತ್ತು ಎಸ್ ಬ್ಯಾಂಡ್ ಗಳಲ್ಲಿ ನ್ಯಾವಿಗೇಷನ್ ಪೇಲೋಡ್ಗಳನ್ನು ಮತ್ತು ಅ-ಬ್ಯಾಂಡ್ನಲ್ಲಿ ರೇಂಡಿಂಗ್ ಪೇಲೋಡ್ ಅನ್ನು ಹೊಂದಿರುತ್ತದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…