ದೇಶ- ವಿದೇಶ

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಇಸ್ರೋ: ಜಿಎಸ್‌ಎಲ್‌ವಿ ರಾಕೆಟ್‌ ಉಡಾವಣೆ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಇಂದು ಶತಕದ ಸಾಧನೆ ಮಾಡಿ ಸಂಭ್ರಮಿಸಿದೆ.

ಇಂದು ಬೆಳಿಗ್ಗೆ 100ನೇ ರಾಕೆಟ್‌ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಇಸ್ರೋ ವಿಶಿಷ್ಟ ಸಾಧನೆ ಮಾಡಿದೆ.

ಇಂದು ಬೆಳಿಗ್ಗೆ 6.30ಕ್ಕೆ ಆಂಧ್ರಪ್ರದೇಶದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಜಿಯೋಸಿಂಕ್ರನೈಸ್‌ ಸ್ಯಾಟಲೈಟ್‌ ಲಾಂಚ್‌ ವೆಹಿಕಲ್‌ ಮೂಲಕ ನಾವಿಕ್‌ ಯೋಜನೆಯ ಎರಡನೇ ತಲೆಮಾರಿನ ಉಪಗ್ರಹ ಎನ್‌ವಿಎಸ್‌-02 ಉಡಾವಣೆಯನ್ನು ಯಶಸ್ವಿಗೊಳಿಸಿದೆ.

ಉಪಗ್ರಹ ಉಡಾವಣೆಯಾದ ಬಳಿಕ ಮಾತನಾಡಿದ ಇಸ್ರೋ ಮುಖ್ಯಸ್ಥ ನಾರಾಯಣನ್‌ ಅವರು, ನಿಗದಿ ಪಡಿಸಿದ ಕಕ್ಷೆಗೆ ಉಪಗ್ರಹ ನಿಖರವಾಗಿ ತಲುಪಿದೆ. 100ನೇ ಉಡಾವಣೆ ಇಸ್ರೋ ಪಾಲಿಗೆ ಮಹತ್ವದ ಮೈಲಿಗಲ್ಲು ಎಂದು ಸಂತಸ ವ್ಯಕ್ತಪಡಿಸಿದರು.

ಎನ್‌ವಿಎಸ್-೦೨ ಉಪಗ್ರಹದ ವೈಶಿಷ್ಟ್ಯಗಳು:

ಎನ್‌ವಿಎಸ್-೦೨ ಉಪಗ್ರಹವು ಎರಡನೇ ತಲೆಮಾರಿನ ನ್ಯಾವಿಕ್ ಉಪಗ್ರಹಗಳ ಭಾಗವಾಗಿದ್ದು, ೧-೨ಕೆ ಬಸ್ ಪ್ಲಾಟ್‌ಫಾರ್ಮ್ ಅನ್ನು ಬಳಸುತ್ತದೆ. ಈ ಉಪಗ್ರಹ ೨,೨೫೦ ಕೆಜಿ ತೂಕವಿದ್ದು, ಸುಮಾರು ೩ ಕಿ.ವ್ಯಾಟ್ ವಿದ್ಯುತ್ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಎಲ್೧, ಎಲ್೫ ಮತ್ತು ಎಸ್ ಬ್ಯಾಂಡ್ ಗಳಲ್ಲಿ ನ್ಯಾವಿಗೇಷನ್ ಪೇಲೋಡ್‌ಗಳನ್ನು ಮತ್ತು ಅ-ಬ್ಯಾಂಡ್‌ನಲ್ಲಿ ರೇಂಡಿಂಗ್ ಪೇಲೋಡ್ ಅನ್ನು ಹೊಂದಿರುತ್ತದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

2 hours ago

ಕೊಡಗು ಜಿಲ್ಲೆಗೆ ಈ ಬಾರಿಯೂ ದೊರಕದ ಸಚಿವ ಸ್ಥಾನ

ನವೀನ್ ಡಿಸೋಜ ಶಾಸಕ ಎ.ಎಸ್.ಪೊನ್ನಣ್ಣಗೆ ಒಲಿದ ಡೆಪ್ಯೂಟಿ ಸ್ಪೀಕರ್ ಸ್ಥಾನ; ಕೊಡಗಿನ ಜನರ ಈ ಬಾರಿಯ ನಿರೀಕ್ಷೆಯೂ ಹುಸಿ ಮಡಿಕೇರಿ:…

2 hours ago

ಸಕ್ಕರೆ ನಾಡಿಗೆ ‘ಅಧಿಕಾರ’ದ ಸಿಹಿ, ಸಂಭ್ರಮ

ಬಿ.ಟಿ.ಮೋಹನ್ ಕುಮಾರ್ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿಗೆ ಸಚಿವ ಸ್ಥಾನ  ಮಂಡ್ಯ: ಡಿ.ಕೆ.ಶಿವಕುಮಾರ್ ನೇತೃತ್ವದ  ಸರ್ಕಾರದಲ್ಲಿ ಈ ಹಿಂದಿನ ಸಂಪುಟದಲ್ಲಿ ಸಚಿವರಾಗಿದ್ದ ಎನ್‌.ಚಲುವರಾಯಸ್ವಾಮಿ…

2 hours ago

ಡಿಕೆಶಿ ಸಂಪುಟ: ಕುಗ್ಗಿದ ಮೈಸೂರು ಜಿಲ್ಲೆ ಪ್ರಾಬಲ್ಯ

ಕೆ.ಬಿ. ರಮೇಶನಾಯಕ ಸಿದ್ದರಾಮಯ್ಯ ಸಂಪುಟದಲ್ಲಿ ೮ ವರ್ಷವೂ ಸಚಿವರಾಗಿದ್ದ ಡಾ.ಎಚ್‌ಸಿಎಂ ಹೊರಕ್ಕೆ ಪಿರಿಯಾಪಟ್ಟಣ ಕ್ಷೇತ್ರದ ಕೆ. ವೆಂಕಟೇಶ್‌ಗೂ ಕೊಕ್ ಮೈಸೂರು:…

2 hours ago

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

1 day ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

1 day ago